ಕಿಡ್ನಾಪ್​ಗೂ ನನಗೂ ಸಂಬಂಧ ಇಲ್ಲ: ಎಸ್​ಐಟಿ ವಿಚಾರಣೆಯಲ್ಲಿ ಯಾವುದೂ ಬಾಯಿಬಿಡದ ರೇವಣ್ಣ

Updated on: May 05, 2024 | 10:49 AM

HD Revanna at SIT enquiry: ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣಗಳಲ್ಲಿ ಸಿಲುಕಿರುವ ಜೆಡಿಎಸ್ ಶಾಸಕ ಹಾಗು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳ ತಂಡ ಬಂಧಿಸಿ ವಿಚಾರಣೆ ನಡೆಸುತ್ತಿದೆ. ಇದೂವರೆಗೆ ನಡೆದ ವಿಚಾರಣೆಯಲ್ಲಿ ರೇವಣ್ಣ ಹೆಚ್ಚು ಬಾಯಿ ತೆರೆದಿಲ್ಲ. ಈ ಕಿಡ್ನಾಪ್​ಗೂ ತನಗೂ ಸಂಬಂಧ ಇಲ್ಲ, ತನಗೆ ಏನೂ ಗೊತ್ತಿಲ್ಲ ಎಂಬಂತಹ ಮಾತುಗಳನ್ನೇ ಹೇಳುತ್ತಾ ಬಂದಿದ್ದಾರೆ ಎನ್ನಲಾಗಿದೆ. ಇವತ್ತೂ ಕೂಡ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ಬೆಂಗಳೂರು, ಮೇ 5: ಕಿಡ್ನಾಪ್ ಪ್ರಕರಣ ಸಂಬಂಧ ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ (HD Revanna) ಅವರನ್ನು ಬಂಧಿಸಲಾಗಿದೆ. ಎಸ್​ಐಟಿ ಅಧಿಕಾರಿಗಳು ನಿನ್ನೆ ರಾತ್ರಿ ರೇವಣ್ಣರ ವಿಚಾರಣೆ ನಡೆಸಿದ್ದಾರೆ. ಇಂದೂ ಕೂಡ ವಿಚಾರಣೆ ಮುಂದುವರಿಯಲಿದೆ. ಇದೂವರೆಗೂ ನಡೆದ ವಿಚಾರಣೆಯಲ್ಲಿ ರೇವಣ್ಣ ಯಾವ ವಿಚಾರದ ಬಗ್ಗೆಯೂ ಏನೂ ಬಾಯಿ ಬಿಟ್ಟಿರುವುದು ಗೊತ್ತಾಗಿಲ್ಲ. ಎಲ್ಲದಕ್ಕೂ ಅವರು ಮೌನವಾಗಿದ್ದಾರೆ. ಈ ಕಿಡ್ನಾಪ್​ಗೂ ತನಗೂ ಸಂಬಂಧ ಇಲ್ಲ ಎನ್ನುವಂತಹ ಮಾತನ್ನೇ ಅವರು ಪದೇ ಪದೇ ಹೇಳುತ್ತಿದ್ದಾರೆ. ಅದು ಬಿಟ್ಟು ಬೇರೆ ಯಾವ ವಿಚಾರದ ಬಗ್ಗೆಯೂ ಅವರಿಂದ ಹೇಳಿಕೆ ಬಂದಿಲ್ಲ.

ಎಚ್.ಡಿ. ರೇವಣ್ಣ ಹಾಗು ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ. ಹೊಳೆನರಸೀಪುರದ ಮನೆಯಲ್ಲಿ ನಡೆದಿತ್ತೆನ್ನಲಾದ ಲೈಂಗಿಕ ಕಿರುಕುಳದ ದೂರನ್ನು ಮನೆಗೆಲಸದವರು ನೀಡಿದ್ದರು. ಅದರಲ್ಲಿ ರೇವಣ್ಣ ಎ1 ಆರೋಪಿ. ಆದರೆ, ಇದು ನಾನ್ ಬೈಲಬಲ್ ಕೃತ್ಯವೆಂದು ಪರಿಗಣಿಸಲಾಗಿಲ್ಲ. ಆದರೆ, ಕೆಆರ್ ನಗರದಲ್ಲಿ ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಲಾಗಿರುವ ಪ್ರಕರಣದಲ್ಲಿ ರೇವಣ್ಣ ಎ1 ಆರೋಪಿಯಾಗಿದ್ದಾರೆ. ಇದು ಗಂಭೀರ ಸ್ವರೂಪದ ಪ್ರಕರಣವಾಗಿದ್ದು, ಇದರಲ್ಲಿ ಅವರಿಗೆ ಜಾಮೀನು ಸಿಗುವುದಿಲ್ಲ.

ಇದನ್ನೂ ಓದಿ: ಸಂಸದ ಪ್ರಜ್ವಲ್​ ರೇವಣ್ಣನ ಸರ್ಕಾರಿ ನಿವಾಸಕ್ಕೆ ಬೀಗ ಜಡಿದ ಎಸ್​ಐಟಿ

ಪ್ರಜ್ವಲ್ ರೇವಣ್ಣ ವಿರುದ್ಧ ನೇರವಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಎಂಪಿ ಹೌಸ್​ನಲ್ಲಿ ತನ್ನ ಮೇಲೆ ಪ್ರಜ್ವಲ್ ಅತ್ಯಾಚಾರ ಎಸಗಿ ವಿಡಿಯೋ ರೆಕಾರ್ಡಿಂಗ್ ಮಾಡಿದ್ದಲ್ಲದೆ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಕೂಡ ಹಾಕಿದ್ದರು ಎಂದು ಮಹಿಳೆಯೊಬ್ಬರು ದೂರು ಕೊಟ್ಟಿದ್ದಾರೆ. ಇದು ಬಹಳ ಗಂಭೀರ ಆರೋಪವಾಗಿದ್ದು ಪ್ರಜ್ವಲ್ ಅವರು ಬಂಧಿತರಾದರೆ ಜಾಮೀನು ಕೂಡ ಸಿಕ್ಕುವುದಿಲ್ಲ.

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More