ಮಹಿಳೆಯೊಬ್ಬರ ಅಪಹರಣ ಆರೋಪದಲ್ಲಿ ರೇವಣ್ಣಗೆ ನ್ಯಾಯಾಂಗ ಬಂಧನ, ಸೆಂಟ್ರಲ್ ಜೈಲಿಗೆ ಶಿಫ್ಟ್
ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಐವರು ಪೊಲೀಸ್ ಇನ್ಸ್ ಪೆಕ್ಟರ್ ಗಳಿಂದ ಭದ್ರತೆ ಒದಗಿಸಲಾಗಿದೆ ಎಂದು ಟಿವಿ9 ಬೆಂಗಳೂರು ವರದಿಗಾರ ಹೇಳಿದ್ದಾರೆ. ಏತನ್ಮಧ್ಯೆ, ಮೇ7 ರಂದು ಸ್ವದೇಶಕ್ಕೆ ಮರಳುವರೆಂದು ಎನ್ನಲಾಗಿದ್ದ ಅವರ ಮಗ ಪ್ರಜ್ವಲ್ ರೇವಣ್ಣ ಇದುವರೆಗೆ ಪತ್ತೆಯಿಲ್ಲ ಮತ್ತು ಎಲ್ಲಿದ್ದಾರೆ ಅನ್ನೋದು ಗೊತ್ತಾಗಿಲ್ಲ.
ಬೆಂಗಳೂರು: ಶಾಸಕ ಹೆಚ್ ಡಿ ರೇವಣ್ಣನ (HD Revanna) ಸ್ಥಿತಿಯನ್ನು ಹೇಗೆ ವ್ಯಾಖ್ಯಾನಿಸಬೇಕೆಂದು ಅರ್ಥವಾಗುತ್ತಿಲ್ಲ. ಕೇವಲ ಹೊಳೆನರಸೀಪುರ (Holenarasipur) ಮಾತ್ರವಲ್ಲ ಹಾಸನದಲ್ಲೂ ಕಳೆದ 4 ದಶಕಗಳಿಂದ ದೊರೆಯಂತೆ ಮೆರೆದ 66-ವರ್ಷ ವಯಸ್ಸಿನ ರೇವಣ್ಣ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಇವತ್ತು ಜೈಲು ಪಾಲಾಗಿದ್ದಾರೆ. ಅವರ ಜಾಮೀನು ಅರ್ಜಿಯನ್ನು (bail petition) ವಜಾಗೊಳಿಸಿದ ನಗರದ 17 ನೇ ಎಸಿಎಂಎಂ ನ್ಯಾಯಾಲಯ ಮೇ 14ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ. ಇಂದು ಸಾಯಂಕಾಲ ಅವರನ್ನು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಯಿತು. ರೇವಣ್ಣರನ್ನು ಜೈಲಿಗೆ ಶಿಫ್ಟ್ ಮಾಡುವಾಗ ಮುಂಜಾಗ್ರತೆ ಮತ್ತು ಭದ್ರತೆಯ ದೃಷ್ಟಿಯಿಂದ ಜೈಲಿನ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಐವರು ಪೊಲೀಸ್ ಇನ್ಸ್ ಪೆಕ್ಟರ್ ಗಳಿಂದ ಭದ್ರತೆ ಒದಗಿಸಲಾಗಿದೆ ಎಂದು ಟಿವಿ9 ಬೆಂಗಳೂರು ವರದಿಗಾರ ಹೇಳಿದ್ದಾರೆ. ಏತನ್ಮಧ್ಯೆ, ಮೇ7 ರಂದು ಸ್ವದೇಶಕ್ಕೆ ಮರಳುವರೆಂದು ಎನ್ನಲಾಗಿದ್ದ ಅವರ ಮಗ ಪ್ರಜ್ವಲ್ ರೇವಣ್ಣ ಇದುವರೆಗೆ ಪತ್ತೆಯಿಲ್ಲ ಮತ್ತು ಎಲ್ಲಿದ್ದಾರೆ ಅನ್ನೋದು ಗೊತ್ತಾಗಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನನ್ನ ಕುಟುಂಬವೇ ಬೇರೆ, ಹೆಚ್ ಡಿ ರೇವಣ್ಣ ಕುಟುಂಬವೇ ಬೇರೆ, ನಮ್ಮ ವ್ಯವಹಾರಗಳೂ ಬೇರೆ ಬೇರೆ: ಹೆಚ್ ಡಿ ಕುಮಾರಸ್ವಾಮಿ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?

