ಮಹಿಳೆಯೊಬ್ಬರ ಅಪಹರಣ ಆರೋಪದಲ್ಲಿ ರೇವಣ್ಣಗೆ ನ್ಯಾಯಾಂಗ ಬಂಧನ, ಸೆಂಟ್ರಲ್ ಜೈಲಿಗೆ ಶಿಫ್ಟ್

ಅರುಣ್​ ಕುಮಾರ್​ ಬೆಳ್ಳಿ

Updated on: May 08, 2024 | 6:28 PM

ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಐವರು ಪೊಲೀಸ್ ಇನ್ಸ್ ಪೆಕ್ಟರ್ ಗಳಿಂದ ಭದ್ರತೆ ಒದಗಿಸಲಾಗಿದೆ ಎಂದು ಟಿವಿ9 ಬೆಂಗಳೂರು ವರದಿಗಾರ ಹೇಳಿದ್ದಾರೆ. ಏತನ್ಮಧ್ಯೆ, ಮೇ7 ರಂದು ಸ್ವದೇಶಕ್ಕೆ ಮರಳುವರೆಂದು ಎನ್ನಲಾಗಿದ್ದ ಅವರ ಮಗ ಪ್ರಜ್ವಲ್ ರೇವಣ್ಣ ಇದುವರೆಗೆ ಪತ್ತೆಯಿಲ್ಲ ಮತ್ತು ಎಲ್ಲಿದ್ದಾರೆ ಅನ್ನೋದು ಗೊತ್ತಾಗಿಲ್ಲ.

ಬೆಂಗಳೂರು: ಶಾಸಕ ಹೆಚ್ ಡಿ ರೇವಣ್ಣನ (HD Revanna) ಸ್ಥಿತಿಯನ್ನು ಹೇಗೆ ವ್ಯಾಖ್ಯಾನಿಸಬೇಕೆಂದು ಅರ್ಥವಾಗುತ್ತಿಲ್ಲ. ಕೇವಲ ಹೊಳೆನರಸೀಪುರ (Holenarasipur) ಮಾತ್ರವಲ್ಲ ಹಾಸನದಲ್ಲೂ ಕಳೆದ 4 ದಶಕಗಳಿಂದ ದೊರೆಯಂತೆ ಮೆರೆದ 66-ವರ್ಷ ವಯಸ್ಸಿನ ರೇವಣ್ಣ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಇವತ್ತು ಜೈಲು ಪಾಲಾಗಿದ್ದಾರೆ. ಅವರ ಜಾಮೀನು ಅರ್ಜಿಯನ್ನು (bail petition) ವಜಾಗೊಳಿಸಿದ ನಗರದ 17 ನೇ ಎಸಿಎಂಎಂ ನ್ಯಾಯಾಲಯ ಮೇ 14ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ. ಇಂದು ಸಾಯಂಕಾಲ ಅವರನ್ನು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಯಿತು. ರೇವಣ್ಣರನ್ನು ಜೈಲಿಗೆ ಶಿಫ್ಟ್ ಮಾಡುವಾಗ ಮುಂಜಾಗ್ರತೆ ಮತ್ತು ಭದ್ರತೆಯ ದೃಷ್ಟಿಯಿಂದ ಜೈಲಿನ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಐವರು ಪೊಲೀಸ್ ಇನ್ಸ್ ಪೆಕ್ಟರ್ ಗಳಿಂದ ಭದ್ರತೆ ಒದಗಿಸಲಾಗಿದೆ ಎಂದು ಟಿವಿ9 ಬೆಂಗಳೂರು ವರದಿಗಾರ ಹೇಳಿದ್ದಾರೆ. ಏತನ್ಮಧ್ಯೆ, ಮೇ7 ರಂದು ಸ್ವದೇಶಕ್ಕೆ ಮರಳುವರೆಂದು ಎನ್ನಲಾಗಿದ್ದ ಅವರ ಮಗ ಪ್ರಜ್ವಲ್ ರೇವಣ್ಣ ಇದುವರೆಗೆ ಪತ್ತೆಯಿಲ್ಲ ಮತ್ತು ಎಲ್ಲಿದ್ದಾರೆ ಅನ್ನೋದು ಗೊತ್ತಾಗಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ನನ್ನ ಕುಟುಂಬವೇ ಬೇರೆ, ಹೆಚ್ ಡಿ ರೇವಣ್ಣ ಕುಟುಂಬವೇ ಬೇರೆ, ನಮ್ಮ ವ್ಯವಹಾರಗಳೂ ಬೇರೆ ಬೇರೆ: ಹೆಚ್ ಡಿ ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.