AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ

ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ

ದಿಲೀಪ್​, ಚೌಡಹಳ್ಳಿ
| Edited By: |

Updated on:Mar 29, 2026 | 2:29 PM

Share

ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ಇನ್ನು ಅತ್ಯಾಚಾರ ಪ್ರಕಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ತಂದೆ ಎಚ್​​ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ರೇವಣ್ಣ ಹಾಗೂ ಪುತ್ರ ಸೂರಜ್ ವೈರಮುಡಿ ಬ್ರಹ್ಮೋತ್ಸವದಲ್ಲಿ ಪ್ರಜ್ವಲ್ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಈ ಮೂಲಕ ಆದಷ್ಟು ಬೇಗ ಜೈಲಿನಿಂದ ಆಚೆ ಬರಲಿ ಎಂದು ಬೇಡಿಕೊಂಡರು.

ಮಂಡ್ಯ, (ಮಾರ್ಚ್​​ 29): ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ಇನ್ನು ಅತ್ಯಾಚಾರ ಪ್ರಕಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ತಂದೆ ಎಚ್​​ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ರೇವಣ್ಣ ಹಾಗೂ ಪುತ್ರ ಸೂರಜ್ ವೈರಮುಡಿ ಬ್ರಹ್ಮೋತ್ಸವದಲ್ಲಿ ಪ್ರಜ್ವಲ್ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಈ ಮೂಲಕ ಆದಷ್ಟು ಬೇಗ ಜೈಲಿನಿಂದ ಆಚೆ ಬರಲಿ ಎಂದು ಬೇಡಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ.

Published on: Mar 29, 2026 02:28 PM
Follow Us