ಅರಕಲಗೂಡು ಹಾಗೂ ಅರಸೀಕೆರೆ ಜೆಡಿಎಸ್ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮುನಿಸು ಶಮನಗೊಳಿಸಲು ರೇವಣ್ಣ ಪ್ರಯತ್ನ

ಅರುಣ್​ ಕುಮಾರ್​ ಬೆಳ್ಳಿ

Updated on: Feb 07, 2023 | 1:36 PM

ಶಿವಲಿಂಗೇಗೌಡರ ಮನವೊಲಿಸಲು ಮತ್ತು ಕಾರ್ಯಕರ್ತರ ನಡುವಿನ ಮುನಿಸನ್ನು ದೂರಮಾಡಲು ಸಭೆಗಳನ್ನು ನಡೆಸುತ್ತಿರುವುದಾಗಿ ರೇವಣ್ಣ ಹೇಳಿದರು.

ಹಾಸನದಲ್ಲಿ ಚುನಾವಣಾ ರಾಜಕೀಯ ಕಾವೇರುತ್ತಿದ್ದಂತೆಯೇ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ (HD Revanna) ಅವರು ಅರಕಲಗೂಡು (Arakalgud) ಮತ್ತು ಅರಸೀಕೆರೆ ಮತಕ್ಷೇತ್ರಗಳಲ್ಲಿನ ಪಕ್ಷದ ಕಾರ್ಯಕರ್ತರ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಪಕ್ಷದ ಅರಸೀಕೆರೆ ಶಾಸಕ ಕೆ ಎಮ್ ಶಿವಲಿಂಗೇಗೌಡರು (KM Shivalinge Gowda) ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರ ಪ್ರಕಟಿಸಿರುವುದರಿಂದ ಈ ಭಾಗದ ಜೆಡಿಎಸ್ ಪಾಳೆಯದಲ್ಲಿ ಗೊಂದಲವೇರ್ಪಟ್ಟಿದೆ. ಅವರ ಮನವೊಲಿಸಲು ಮತ್ತು ಕಾರ್ಯಕರ್ತರ ನಡುವಿನ ಮುನಿಸನ್ನು ದೂರಮಾಡಲು ಸಭೆಗಳನ್ನು ನಡೆಸುತ್ತಿರುವುದಾಗಿ ರೇವಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 07, 2023 12:55 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.