ಅಭಿಮಾನಿಗಳ ಪ್ರೀತಿ ವಿಶ್ವಾಸ ಕಂಡು ಭಾವುಕರಾಗಿ ಕಣ್ಣೀರು ಹಾಕಿದ ಶಾಸಕ ಹೆಚ್ ಡಿ ರೇವಣ್ಣ

ಅವರೊಡನೆ ಮಾತಾಡಲು ರೇವಣ್ಣ ಹೊರ ಬಂದಾಗ ಜನ ಅಣ್ಣಾ ನಿಮ್ಮೊಂದಿಗೆ ನಾವಿದ್ದೇವೆ, ನೀವು ಯಾವ ಕಾರಣಕ್ಕೂ ಹೆದರಬಾರದು ಅಂತ ಕಿರುಚುವ ಧ್ವನಿಯಲ್ಲಿ ಹೇಳಿದರು. ರೆವಣ್ಣ ಹತ್ತಿರ ಹೋಗುವಲ್ಲಿ ಸಫಲರಾದ ಕೆಲವರು ಅವರನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದರು ಮತ್ತು ಕೆಲವರು ಅವರ ಗದ್ದ, ಕೆನ್ನೆ ನೇವರಿಸಿ ತಮ್ಮ ಪ್ರೀತಿ-ಅಭಿಮಾನ ವ್ಯಕ್ತಪಡಿಸಿದರು.

ಅಭಿಮಾನಿಗಳ ಪ್ರೀತಿ ವಿಶ್ವಾಸ ಕಂಡು ಭಾವುಕರಾಗಿ ಕಣ್ಣೀರು ಹಾಕಿದ ಶಾಸಕ ಹೆಚ್ ಡಿ ರೇವಣ್ಣ
|

Updated on: May 15, 2024 | 3:52 PM

ಬೆಂಗಳೂರು: ಅಭಿಮಾನಿಗಳು ಮತ್ತು ಬೆಂಬಲಿಗರ ಪ್ರೀತಿ ವಿಶ್ವಾಸಕ್ಕೆ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ (HD Revanna) ಭಾವುಕರಾಗುತ್ತಿದ್ದಾರೆ. ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ (woman abduction case) ಅವರು ಬಂದನಕ್ಕೊಳಗಾಗಿ ಜೈಲು ಸೇರಿ ನಿನ್ನೆ ಜಾಮೀನು ಪಡೆದು ಹೊರಬಂದಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ರೇವಣ್ಣರನ್ನು ಕಂಡು ಮಾತಾಡಿಸಲು ಬೆಂಬಲಿಗರ (supporters) ಮಹಾಪೂರ ಹರಿದು ಬರುತ್ತಿದೆ. ನಿನ್ನೆ ಮಾಜಿ ಪ್ರಧಾನಿ ಹೆಚ್ ಡಿ ರೇವಣ್ಣ ಮನೆ ಮುಂದೆ ಸಾವಿರಾರು ಅಭಿಮಾನಿಗಳು ನೆರೆದಿದ್ದರು. ಇವತ್ತು ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಮನೆ ಮುಂದೆ ಅಭಿಮಾನಿಗಳ ದಂಡನ್ನು ದೃಶ್ಯಗಳಲ್ಲಿ ನೋಡಬಹುದು. ಅವರೊಡನೆ ಮಾತಾಡಲು ರೇವಣ್ಣ ಹೊರ ಬಂದಾಗ ಜನ ಅಣ್ಣಾ ನಿಮ್ಮೊಂದಿಗೆ ನಾವಿದ್ದೇವೆ, ನೀವು ಯಾವ ಕಾರಣಕ್ಕೂ ಹೆದರಬಾರದು ಅಂತ ಕಿರುಚುವ ಧ್ವನಿಯಲ್ಲಿ ಹೇಳಿದರು. ರೆವಣ್ಣ ಹತ್ತಿರ ಹೋಗುವಲ್ಲಿ ಸಫಲರಾದ ಕೆಲವರು ಅವರನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದರು ಮತ್ತು ಕೆಲವರು ಅವರ ಗದ್ದ, ಕೆನ್ನೆ ನೇವರಿಸಿ ತಮ್ಮ ಪ್ರೀತಿ-ಅಭಿಮಾನ ವ್ಯಕ್ತಪಡಿಸಿದರು. ರೇವಣ್ಣರಿಗೂ ಭಾವನೆಗಳನ್ನು ಅದುಮಿಡುವುದು ಸಾಧ್ಯವಾಗದೆ ಕಣ್ಣೀರು ಸುರಿಸಿದಾಗ ಬೆಂಬಲಿಗರು, ಅಣ್ಣಾ ದಯವಿಟ್ಟು ಅಳಬೇಡಿ, ನಾವಿದ್ದೇವೆ ಅಂತ ಭರವಸೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Prajwal Revanna case: ಪ್ರಜ್ವಲ್ ದುಬೈಯಿಂದ ಬೆಂಗಳೂರುಗೆ ಬರುವ ಮಾಹಿತಿ, ವಿಮಾನ ನಿಲ್ದಾಣದಲ್ಲೇ ಬಂಧನ ಸಾಧ್ಯತೆ!

Follow us
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು