ಜೈಲಿಂದ ಹೊರಬಂದು ನಿರಾಳರಾಗಿರುವ ಹೆಚ್ ಡಿ ರೇವಣ್ಣರಿಂದ ಬೆಂಗಳೂರಿನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಕೆ

ವಿಧಾನಸಭಾ ಅಧಿವೇಶನ ನಡೆಯುವಾಗಲೂ ಅವರ ಕೈಯಲ್ಲಿ ನಿಂಬೆಹಣ್ಣಿರುವುದನ್ನು ಜನ ಗಮನಿಸಿದ್ದಾರೆ. ಹಾಗಾಗಿ, ಅವರು ಈಗ ಎದುರಾಗಿರುವ ಸಂಕಷ್ಟದ ಹಿನ್ನೆಲೆಯಲ್ಲಿ ವಿಘ್ನ ನಿವಾರಕ ವಿನಾಯಕನಿಗೆ ಅವರು ಪೂಜೆ ಸಲ್ಲಿಸಿದ್ದಾರೆ. ದೃಶ್ಯಗಳಲ್ಲಿ ನಿಮಗೆ ಕಾಣುತ್ತಿರುವುದು ನಗರದ ಜಯನಗರದಲ್ಲಿರುವ ವಿನಾಯಕ ದೇವಸ್ಥಾನ.

ಜೈಲಿಂದ ಹೊರಬಂದು ನಿರಾಳರಾಗಿರುವ ಹೆಚ್ ಡಿ ರೇವಣ್ಣರಿಂದ ಬೆಂಗಳೂರಿನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಕೆ
|

Updated on: May 16, 2024 | 10:55 AM

ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ (woman abduction case) ಆರೋಪಿಯಾಗಿ ಜೈಲಿಗೆ ಹೋಗಿ ಜಾಮೀನು ಪಡೆದು ಹೊರಬಂದಿರುವ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ (HD Revanna) ತಮ್ಮ ಬದುಕಿನಲ್ಲಿ ನಡೆದ ಘಟನೆಯಿಂದ ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ನಿನ್ನೆ ಬೆಂಗಳೂರಿನ ತಮ್ಮ ಮನೆಗೆ ಭೇಟಿ ನೀಡಿದ್ದ ಸಹಸ್ರಾರು ಅಭಿಮಾನಿಗಳೊಂದಿಗೆ ಮಾತಾಡುವಾಗ ಭಾವುಕರಾಗಿದ್ದ ರೇವಣ್ಣ ಇಂದು ಬೆಳಗ್ಗೆ ದೇವಸ್ಥಾನಗಳಿಗೆ ತೆರಳಿ ಪೂಜೆ (offer puja) ಸಲ್ಲಿಸಿದರು. ಸಂಕಟ, ಆಪತ್ತುಗಳು ಎದುರಾದಾಗ ಜನ ದೇವರ ಮೊರೆಹೋಗಿ, ಅವುಗಳಿಂದ ಪಾರು ಮಾಡು, ಪರಿಸ್ಥಿತಿ ಎದುರಿಸಲು ಧೈರ್ಯ ನೀಡು ಅಂತ ಪ್ರಾರ್ಥಿಸಿಕೊಳ್ಳುತ್ತಾರೆ. ರೇವಣ್ಣ ಧಾರ್ಮಿಕ ಪ್ರವೃತ್ತಿಯ ವ್ಯಕ್ತಿ ಮತ್ತು ಮಹಾನ್ ದೈವಭಕ್ತ. ಸಹಜವಾದ ದಿನಗಳಲ್ಲೂ ಅವರು ದೇವಸ್ಥಾನಗಳಿಗೆ ತಮ್ಮ ಪತ್ನಿ ಭವಾನಿಯವರೊಂದಿಗೆ ಭೇಟಿ ನೀಡುವುದನ್ನು ಎಲ್ಲರೂ ನೋಡಿದ್ದಾರೆ. ವಿಧಾನಸಭಾ ಅಧಿವೇಶನ ನಡೆಯುವಾಗಲೂ ಅವರ ಕೈಯಲ್ಲಿ ನಿಂಬೆಹಣ್ಣಿರುವುದನ್ನು ಜನ ಗಮನಿಸಿದ್ದಾರೆ. ಹಾಗಾಗಿ, ಅವರು ಈಗ ಎದುರಾಗಿರುವ ಸಂಕಷ್ಟದ ಹಿನ್ನೆಲೆಯಲ್ಲಿ ವಿಘ್ನ ನಿವಾರಕ ವಿನಾಯಕನಿಗೆ ಅವರು ಪೂಜೆ ಸಲ್ಲಿಸಿದ್ದಾರೆ. ದೃಶ್ಯಗಳಲ್ಲಿ ನಿಮಗೆ ಕಾಣುತ್ತಿರುವುದು ನಗರದ ಜಯನಗರದಲ್ಲಿರುವ ವಿನಾಯಕ ದೇವಸ್ಥಾನ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಅಭಿಮಾನಿಗಳ ಪ್ರೀತಿ ವಿಶ್ವಾಸ ಕಂಡು ಭಾವುಕರಾಗಿ ಕಣ್ಣೀರು ಹಾಕಿದ ಶಾಸಕ ಹೆಚ್ ಡಿ ರೇವಣ್ಣ

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ