BMTC Bus Service: ಬೆಂಗಳೂರು-ಚಿಕ್ಕಬಳ್ಳಾಪುರ ನಡುವೆ ಬಿಎಂಟಿಸಿ ಬಸ್ ಸಂಚಾರ ಸೇವೆಗೆ ಚಾಲನೆ ನೀಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 21, 2023 | 6:18 PM

ಬಸ್ ಸೇವೆಗೆ ಚಾಲನೆ ನೀಡಿದ ಬಳಿಕ ಸುಧಾಕರ್ ಕೊಂಚ ದೂರದವರಗೆ ಒಂದು ಬಸ್ ನಲ್ಲಿ ಪ್ರಯಾಣಿಸಿದರು. ಅವರೊಂದಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮತ್ತು ಉಪಾಧ್ಯಕ್ಷ ನವೀನ್ ಕಿರಣ್ ಇದ್ದರು.

ಚಿಕ್ಕಬಳ್ಳಾಪುರ: ಬೆಂಗಳೂರು ನಗರದಿಂದ (Bengaluru city) ಸುಮಾರು 60 ಕಿಮೀ ದೂರದಲ್ಲಿರುವ ಚಿಕ್ಕಬಳ್ಳಾಪುರ (Chikkaballapura) ಇನ್ನು ರಾಜಧಾನಿ ವ್ಯಾಪ್ತಿಗೆ ಬಂದಂತಯೇ. ಯಾಕೆ ಗೊತ್ತಾ? ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ (BMTC) ಬಸ್ ಸಂಚಾರಕ್ಕೆ ಇಂದು ಅರೊಗ್ಯ ಸಚಿವ ಡಾ ಕೆ ಸುಧಾಕರ್ ಚಾಲನೆ ನೀಡಿದರು. ಪ್ರಾಯೋಗಿಕವಾಗಿ ಎರಡು ಬಸ್ ಗಳ ಸಂಚಾರವನ್ನು ಆರಂಭಿಸಲಾಗಿದೆ. ಎರಡು ನಗರಗಳ ನಡುವಿನ ಪ್ರಯಾಣಕ್ಕೆ ಬಸ್ ದರವನ್ನು ರೂ. 60 ನಿಗದಿ ಮಾಡಲಾಗಿದ್ದು ಬಸ್ ಸೇವೆಗೆ ಚಾಲನೆ ನೀಡಿದ ಬಳಿಕ ಸುಧಾಕರ್ ಕೊಂಚ ದೂರದವರಗೆ ಒಂದು ಬಸ್ ನಲ್ಲಿ ಪ್ರಯಾಣಿಸಿದರು. ಅವರೊಂದಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮತ್ತು ಉಪಾಧ್ಯಕ್ಷ ನವೀನ್ ಕಿರಣ್ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.