Assembly Polls:  ಬೆಂಗಳೂರಿಂದ ಚಿಕ್ಕಬಳ್ಳಾಪುರದ ಚೇಳೂರಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 28, 2023 | 6:53 PM

ಇವತ್ತು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಸಹ ಬೆಂಗಳೂರಿಂದ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಚೇಳೂರು ಗ್ರಾಮಕ್ಕೆ ಚಾಪರ್ ನಲ್ಲೇ ಆಗಮಿಸಿದರು.

ಚಿಕ್ಕಬಳ್ಳಾಪುರ: ಈಗಿನ ಕಾಲದ ರಾಜಕಾರಣಿಗಳಿಗೆ ಹೆಲಿಕಾಪ್ಟರ್ (Helicopter) ಹಾರಾಡುವುದು ಸಾಮಾನ್ಯ ವಿಷಯವಾಗಿಬಿಟ್ಟಿದೆ ಮಾರಾಯ್ರೇ. ಈ ಪಾಟಿ ದುಡ್ಟು ಇವರಿಗೆ ಬರೋದು ಎಲ್ಲಿಂದ ಬರುತ್ತದೆ ಅಂತ ಆಶ್ಚರ್ಯವೂ ಆಗುತ್ತದೆ. ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ, ಬಿ ಎಸ್ ಯಡಿಯೂರಪ್ಪ, ಡಿಕೆ ಶಿವಕುಮಾರ್ ಮೊದಲಾದವರೆಲ್ಲ ಚಾಪರ್ ಗಳಲ್ಲಿ ಸುತ್ತುವುದನ್ನು ನಾವು ನೋಡಿದ್ದೇವೆ. ಇವತ್ತು ಆರೋಗ್ಯ ಸಚಿವ ಡಾ ಕೆ ಸುಧಾಕರ್ (Dr K Sudhakar) ಅವರು ಸಹ ಬೆಂಗಳೂರಿಂದ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಚೇಳೂರು ಗ್ರಾಮಕ್ಕೆ ಚಾಪರ್ ನಲ್ಲೇ ಆಗಮಿಸಿದರು. ನಾಳೆ ಬಾಬುರಾವ್ ಚಿಂಚನಸೂರ್ (Baburao Chinchansur) ಸಹ ಬೆಂಗಳೂರಿಂದ ಗುರುಮಠಕಲ್ ಗೆ ಹೆಲಿಕಾಪ್ಟರ್ ನಲ್ಲಿ ಹೋದರೂ ಆಶ್ಚರ್ಯವಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.