HD Kumaraswamy; ಚಲುವರಾಯಸ್ವಾಮಿ ಹೇಳಿದ್ದು ಕೇಳಿಸಿಕೊಂಡಿದ್ದೇನೆ, ಕಾಂಗ್ರೆಸ್ ಪಕ್ಷದ ನಿಜಬಣ್ಣ ಬಯಲಾಗುತ್ತಿದೆ: ಹೆಚ್ ಡಿ ಕುಮಾರಸ್ವಾಮಿ, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Jun 07, 2023 | 5:25 PM

ಇನ್ನೂ ಯಾವ್ಯಾವ ಸಂಗತಿಗಳು ಬಯಲಿಗೆ ಬರಲಿವೆಯೋ ಕಾದು ನೋಡೋಣ ಎಂದು ಕುಮಾರಸ್ವಾಮಿ ಹೇಳಿದರು.  

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ (Cheluvarayaswamy) ಯಾರೊಂದಿಗೆ ಮಾತಾಡುವಾಗ ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದ ಗ್ಯಾರಂಟಿಗಳು ಚೀಪ್ ಪಾಪ್ಯುಲಾರಿಟಿಗೋಸ್ಕರ (cheap popularity) ಅಂತ ಹೇಳಿದ್ದು ವೈರಲ್ ಆಗಿದ್ದು, ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ತಮ್ಮ ಪ್ರತಿಕ್ರಿಯೆ ನೀಡುತ್ತಾ ಕಾಂಗ್ರೆಸ್ ಪಕ್ಷದ ನಿಜಬಣ್ಣ ಕ್ರಮೇಣ ಬಯಲಾಗುತ್ತಿದೆ ಎಂದಿದ್ದಾರೆ. ಚಲುವರಾಯಸ್ವಾಮಿ ಆಡಿದ ಮಾತನ್ನು ಕೇಳಿಸಿಕೊಂಡಿರುವುದಾಗಿ ಹೇಳಿದ ಕುಮಾರಸ್ವಾಮಿ, ಗ್ಯಾರಂಟಿ ಈಡೇರಿಸುವ ನೆಪದಲ್ಲಿ ವಿದ್ಯುತ್ ದರವನ್ನು ಹೆಚ್ಚಿಸಲಾಗಿದೆ ಎಂದರು. ಕೇವಲ ಜನರ ವೋಟು ಗಿಟ್ಟಿಸಲು ಕಾಂಗ್ರೆಸ್ ಪಕ್ಷದ ನಾಯಕರು ಕೀಳುಮಟ್ಟದ ರಾಜಕಾರಣ ಮಾಡಿದ್ದಾರೆ, ಸತ್ಯಾಂಶಗಳು ಒಂದೊಂದಾಗಿ ಹೊರಬೀಳುತ್ತಿವೆ, ಇನ್ನೂ ಯಾವ್ಯಾವ ಸಂಗತಿಗಳು ಬಯಲಿಗೆ ಬರಲಿವೆಯೋ ಕಾದು ನೋಡೋಣ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

 

 

Published on: Jun 07, 2023 05:25 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.