AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ಪ್ರಶಾಂತ್​ ಬಿ.
| Edited By: |

Updated on: Dec 26, 2025 | 2:41 PM

Share

ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಹಾಗೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನಡುವೆ ಕೇಂದ್ರ ಸಚಿವ ವಿ ಸೋಮಣ್ಣ ಎದುರಲ್ಲೇ ತೀವ್ರ ಮಾತಿನ ಜಟಾಪಟಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಸಚಿವರ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ನಂತರ ರೈಲ್ವೆ ಕಾಮಗಾರಿಗಳ ವೀಕ್ಷಣೆ ಮುಂದುವರಿದಿದೆ.

ರಾಮನಗರ, ಡಿಸೆಂಬರ್ 26: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಹಾಗೂ ನಗರಸಭೆ ಅಧ್ಯಕ್ಷರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರ ಎದುರೇ ಈ ಘಟನೆ ನಡೆದಿರುವುದು ವಿಶೇಷ. ರಾಮನಗರಕ್ಕೆ ರೈಲ್ವೆ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ್ದ ಸಚಿವ ವಿ. ಸೋಮಣ್ಣ ಅವರ ಎದುರಲ್ಲೇ, ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹಾಗೂ ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ನಡುವೆ ಮಾತಿನ ಜಟಾಪಟಿ ಆರಂಭವಾಯಿತು. ಕೆಲಕಾಲ ಇಬ್ಬರ ನಡುವಿನ ವಾಗ್ವಾದ ತೀವ್ರಗೊಂಡಿತು. ಪರಿಸ್ಥಿತಿ ಕೈ ಮೀರುವ ಲಕ್ಷಣ ಕಾಣುತ್ತಿದ್ದಂತೆಯೇ ಸಚಿವ ವಿ. ಸೋಮಣ್ಣ ಮಧ್ಯ ಪ್ರವೇಶಿಸಿ ನಗರಸಭೆ ಅಧ್ಯಕ್ಷರನ್ನು ಸಮಾಧಾನಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More