Chikkamagalur Rains: ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರೀ ಮಳೆ

|

Updated on: May 25, 2023 | 4:56 PM

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಮಳೆ ಸುರಿದಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿ ಕೂಡ ಧಾರಾಕಾರ (Chikkamagalur Rains) ಮಳೆಯಾಗಿದೆ.

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಮಳೆ ಸುರಿದಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿ ಕೂಡ ಧಾರಾಕಾರ (Chikkamagalur Rains) ಮಳೆಯಾಗಿದೆ. ಪರಿಣಾಮವಾಗಿ ಲಕ್ಷಾಂತರ ಮೌಲ್ಯದ ಬೆಳೆ ನಾಶವಾಗಿದೆ. ಮಳೆ‌ ಆರ್ಭಟಕ್ಕೆ ನೂರಾರು ಪ್ರವಾಸಿಗರು (Tourists) ಪರದಾಡುವಂತಾಗಿದೆ. ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ, ದತ್ತಪೀಠದಲ್ಲಿ ಕೂಡ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಸಖರಾಯಪಟ್ಟಣ ಸಮೀಪದ ಲಕ್ಕಮ್ಮನಹಳ್ಳಿಯಲ್ಲಿ ಧಾರಾಕಾರ ಮಳೆಗೆ ಅಡಿಕೆ ತೋಟಗಳು ಜಲಾವೃತಗೊಂಡಿದ್ದು, ಬೆಳೆ ಕೊಚ್ಚಿ ಹೋಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Thu, 25 May 23

Follow us on