Chikkamagaluru Rain: ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಚಿಕ್ಕಮಗಳೂರು ಜಿಲ್ಲೆಯ (Chikkamagaluru) ಕೊಟ್ಟಿಗೆಹಾರ, ಚಾರ್ಮಾಡಿ ,ಬಣಕಲ್, ಆಲ್ದೂರು ಹಾಗೂ ಮತ್ತಿಕಟ್ಟೆಯಲ್ಲಿ ಭಾರೀ ಗಾಳಿ, ಗುಡುಗು-ಸಿಡಿಲಿನ ಸಹಿತ ಮಳೆ ಸುರಿಯುತ್ತಿದೆ. ಹಲವೆಡೆ ಭಾರೀ ಆಲಿಕಲ್ಲಿನ ಮಳೆಯಾಗಿದೆ. ಇನ್ನು ಮೂಡಿಗೆರೆ ತಾಲೂಕಿನ ಬಾಳೂರು ಬಳಿ ರಸ್ತೆಗೆ ಅಡ್ಡಲಾಗಿ ಮರ ಬದ್ದಿದ್ದು, ಬಾಳೂರು ಕಳಸ ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು ಇದ್ದಕ್ಕಿದ್ದಂತೆ ಆರಂಭವಾದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಚಿಕ್ಕಮಗಳೂರು, (ಏಪ್ರಿಲ್ 24): ಜಿಲ್ಲೆಯ (Chikkamagaluru) ಕೊಟ್ಟಿಗೆಹಾರ, ಚಾರ್ಮಾಡಿ ,ಬಣಕಲ್, ಆಲ್ದೂರು ಹಾಗೂ ಮತ್ತಿಕಟ್ಟೆಯಲ್ಲಿ ಭಾರೀ ಗಾಳಿ, ಗುಡುಗು-ಸಿಡಿಲಿನ ಸಹಿತ ಮಳೆ ಸುರಿಯುತ್ತಿದೆ. ಹಲವೆಡೆ ಭಾರೀ ಆಲಿಕಲ್ಲಿನ ಮಳೆಯಾಗಿದೆ. ಇನ್ನು ಮೂಡಿಗೆರೆ ತಾಲೂಕಿನ ಬಾಳೂರು ಬಳಿ ರಸ್ತೆಗೆ ಅಡ್ಡಲಾಗಿ ಮರ ಬದ್ದಿದ್ದು, ಬಾಳೂರು ಕಳಸ ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು ಇದ್ದಕ್ಕಿದ್ದಂತೆ ಆರಂಭವಾದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಗಲಲ್ಲಿ ಭಾರೀ ಬಿಸಿಲು, ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲು-ಮಳೆಯಿಂದ ಭೂಮಿಯ ಧಗೆ ಹೆಚ್ಚಾಗಿ ಜನರು ಹೈರಾಣಾಗಿದ್ದಾರೆ. ಮತ್ತೊಂದೆಡೆ ಕಾಫಿ, ಅಡಿಕೆಗೆ ನೀರು ಹಾಯಿಸಲು ಪರದಾಡುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
