ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್ಪಾಸ್ನಲ್ಲೇ ವಾಹನ ಸವಾರರ ಅಪಾಯಕಾರಿ ಪ್ರಯಾಣ
ಬಳ್ಳಾರಿ ಜಿಲ್ಲೆಯಲ್ಲಿಯೂ ಬುಧವಾರ ಸಂಜೆ ಭಾರಿ ಮಳೆಯಾಗಿದೆ. ಪರಿಣಾಮವಾಗಿ ಕೂಡ್ಲಿಗಿ, ಕೊಟ್ಟೂರು, ದಾವಣಗೆರೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡು ವಾಹನ ಸವಾರರಿಗೆ ಸಂಕಷ್ಟ ಎದುರಾಯಿತು. ಆದಾಗ್ಯೂ, ವಾಹನ ಚಾಲಕರು ನೀರು ತುಂಬಿಕೊಂಡಿರುವ ಅಂಡರ್ ಪಾಸ್ನಲ್ಲೇ ಅಪಾಯಕಾರಿ ಪ್ರಯಾಣ ಕೈಗೊಂಡರು.
ಬಳ್ಳಾರಿ, ಮೇ 15: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ಸೇರಿದಂತೆ ವಿವಿಧೆಡೆ ಬುಧವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಯಶವಂತನಗರದ ರೈಲ್ವೆ ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡುವಂತಾಯಿತು. ಕೂಡ್ಲಿಗಿ, ಕೊಟ್ಟೂರು, ದಾವಣಗೆರೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಅಂಡರ್ ಪಾಸ್ ಇದಾಗಿದೆ. ನೀರು ತುಂಬಿಕೊಂಡಿರುವ ಅಂಡರ್ ಪಾಸ್ನಲ್ಲೇ ವಾಹನ ಸವಾರರು ಅಪಾಯಕಾರಿ ಯಾನ ಕೈಗೊಂಡರು. ಮತ್ತೊಂದೆಡೆ ಭಾರಿ ಮಳೆಗೆ ಸಂಡೂರಿನ ನಾರಿ ಹಳ್ಳ ಉಕ್ಕಿ ಹರಿದಿದೆ.
Latest Videos
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
