ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್ಪಾಸ್ನಲ್ಲೇ ವಾಹನ ಸವಾರರ ಅಪಾಯಕಾರಿ ಪ್ರಯಾಣ
ಬಳ್ಳಾರಿ ಜಿಲ್ಲೆಯಲ್ಲಿಯೂ ಬುಧವಾರ ಸಂಜೆ ಭಾರಿ ಮಳೆಯಾಗಿದೆ. ಪರಿಣಾಮವಾಗಿ ಕೂಡ್ಲಿಗಿ, ಕೊಟ್ಟೂರು, ದಾವಣಗೆರೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡು ವಾಹನ ಸವಾರರಿಗೆ ಸಂಕಷ್ಟ ಎದುರಾಯಿತು. ಆದಾಗ್ಯೂ, ವಾಹನ ಚಾಲಕರು ನೀರು ತುಂಬಿಕೊಂಡಿರುವ ಅಂಡರ್ ಪಾಸ್ನಲ್ಲೇ ಅಪಾಯಕಾರಿ ಪ್ರಯಾಣ ಕೈಗೊಂಡರು.
ಬಳ್ಳಾರಿ, ಮೇ 15: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ಸೇರಿದಂತೆ ವಿವಿಧೆಡೆ ಬುಧವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಯಶವಂತನಗರದ ರೈಲ್ವೆ ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡುವಂತಾಯಿತು. ಕೂಡ್ಲಿಗಿ, ಕೊಟ್ಟೂರು, ದಾವಣಗೆರೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಅಂಡರ್ ಪಾಸ್ ಇದಾಗಿದೆ. ನೀರು ತುಂಬಿಕೊಂಡಿರುವ ಅಂಡರ್ ಪಾಸ್ನಲ್ಲೇ ವಾಹನ ಸವಾರರು ಅಪಾಯಕಾರಿ ಯಾನ ಕೈಗೊಂಡರು. ಮತ್ತೊಂದೆಡೆ ಭಾರಿ ಮಳೆಗೆ ಸಂಡೂರಿನ ನಾರಿ ಹಳ್ಳ ಉಕ್ಕಿ ಹರಿದಿದೆ.
Follow Us
Latest Videos
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
