Andhra Pradesh Rain: ಪ್ರವಾಹದಲ್ಲಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಿದ ಭಾರತೀಯ ವಾಯುಸೇನೆ; ವಿಡಿಯೋ ನೋಡಿ

Edited By:

Updated on: Nov 20, 2021 | 9:18 AM

ಆಂಧ್ರಪ್ರದೇಶ: ಅನಂತಪುರ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಹತ್ತು ಮಂದಿಯನ್ನು ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ರಕ್ಷಿಸುವ ದೃಶ್ಯಗಳು ವೈರಲ್ ಆಗಿವೆ.

ಅನಂತಪುರ: ಆಂಧ್ರಪ್ರದೇಶದ ರಾಯಲಸೀಮೆ ಪ್ರಾಂತ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದುವರೆಗೆ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 100ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದಾರೆ. ಹಲವೆಡೆ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಜನರ ರಕ್ಷಣೆ ಮಾಡಲಾಗುತ್ತಿದ್ದು, ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್​​ಗಳನ್ನೂ ಬಳಸಿಕೊಳ್ಳಲಾಗುತ್ತಿದೆ. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಹತ್ತು ಮಂದಿಯನ್ನು  IAF MI-17 ಮೂಲಕ ರಕ್ಷಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಅನಂತಪುರ ಜಿಲ್ಲೆಯ ಚಿತ್ರಾವತಿ ನದಿಯಲ್ಲಿ ಸಿಲುಕಿಕೊಂಡದ್ದ 10 ಜನರನ್ನ ಭಾರೀ ಸಾಹಸ ಮಾಡಿ ಭಾರತೀಯ ವಾಯುಸೇನೆ ರಕ್ಷಿಸಿದೆ.

ಕಾರ್ಯಾಚರಣೆಯಲ್ಲಿ ಎನ್​ಡಿಆರ್​ಎಫ್, ಎಸ್​ಡಿಆರ್​ಎಫ್, ಅಗ್ನಿ ಶಾಮಕ ದಳ ಸೇರಿದಂತೆ ಇತರ ಇಲಾಖೆಗಳೂ ಭಾಗವಹಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಂಧ್ರ ಪ್ರದೇಶ ಪೊಲೀಸ್ ಇಲಾಖೆ ಹಂಚಿಕೊಂಡ ವಿಡಿಯೋ ಇಲ್ಲಿದೆ:

ಆಂಧ್ರಪ್ರದೇಶದಲ್ಲಿ ಮಳೆಗೆ ಇದುವರೆಗೆ ಒಟ್ಟಾರೆ 17ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ರಾಯಲಸೀಮೆ ಪ್ರಾಂತ್ಯದ ಜಿಲ್ಲೆಗಳಾದ ಚಿತ್ತೂರು, ಕಡಪ, ಕರ್ನೂಲು, ಅನಂತಪುರದಲ್ಲಿ ಭಾರಿ ಮಳೆಯಾಗಿದೆ. ಇದುವರೆಗೆ ಸುಮಾರು ನೂರಕ್ಕೂ ಅಧಿಕ ಜನ ನಾಪತ್ತೆಯಾಗಿದ್ದು, ಪರಿಹಾರ ಕಾರ್ಯಾಚರಣೆ ಸಾಗುತ್ತಿದೆ.

YouTube video player
ಇದನ್ನೂ ಓದಿ:

Andhra Pradesh Rain: ಮಳೆಗೆ ನಲುಗಿದ ರಾಯಲಸೀಮೆ ಪ್ರಾಂತ್ಯ; ಒಟ್ಟು 17 ಮಂದಿ ಸಾವು, 100ಕ್ಕೂ ಅಧಿಕ ಜನ ನಾಪತ್ತೆ

ಮೈಸೂರಿನಲ್ಲಿ ಮಳೆ ಅವಾಂತರಕ್ಕೆ ರೊಚ್ಚಿಗೆದ್ದ ಜನರು; ಅವ್ಯವಸ್ಥೆಯ ಬಗ್ಗೆ ವಿಡಿಯೋ ಮಾಡಿ ತೀವ್ರ ಆಕ್ರೋಶ

Follow Us