Bidar: ಧಾರಾಕಾರ ಮಳೆಯಿಂದಾಗಿ ಒಡೆದ ತ್ರಿಪುರಾಂತ ಕೆರೆ; ಜಮೀನುಗಳು ಜಲಾವೃತ

Updated on: Sep 30, 2025 | 4:37 PM

ಬೀದರ್​ನ ಬಸವಕಲ್ಯಾಣದಲ್ಲಿ ಧಾರಾಕಾರ ಮಳೆಯಾಗಿದ್ದು, ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಕೆರೆಯ ನೀರು ನುಗ್ಗಿ ಬಸವಕಲ್ಯಾನದ ಜಮೀನುಗಳೆಲ್ಲವೂ ಜಲಾವೃತವಾಗಿವೆ. ಈ ದೃಶ್ಯಾವಳಿಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಐತಿಹಾಸಿಕ ಕೆರೆಯ ಕೆಳಭಾಗದಲ್ಲಿರುವ ಗಾರ್ಡನ್ ಕೂಡಾ ಸಂಪೂರ್ನವಾಗಿ ಮುಳುಗಿರುವ ದೃಶ್ಯಾವಳಿಗಳು ಕಂಡುಬಂದಿವೆ.

ಬೀದರ್, ಸೆಪ್ಟೆಂಬರ್ 30:  ಬಸವಕಲ್ಯಾಣದಲ್ಲಿ ಧಾರಾಕಾರ ಮಳೆಗೆ ಐತಿಹಾಸಿಕ ತ್ರಿಪುರಾಂತ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಕೆರೆಯ ನೀರು ನುಗ್ಗಿ ಬಸವಕಲ್ಯಾಣ ಜಮೀನುಗಳು ಜಲಾವೃತವಾಗಿವೆ. ರಸ್ತೆಗಳು ,ಕೆಲವು ಬಡಾವಣೆಗಳು ಜಲಾವೃತವಾಗಿವೆ. ಐತಿಹಾಸಿಕ ಕೆರೆಯ ಕೆಳಭಾಗದಲ್ಲಿರುವ ಗಾರ್ಡನ್ ಕೂಡಾ ಸಂಪೂರ್ಣವಾಗಿ ಮುಳುಗಡೆ. ತ್ರಿಪುರಾಂತ ಕೆರೆ ಒಡೆದು ಜಮೀನುಗಳಿಗೆ ನೀರು ನುಗ್ಗಿರುವ  ಎಲ್ಲಾ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿವೆ. ವೀಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More