ವಿಜಯಪುರ: ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ

Edited By:

Updated on: Jul 08, 2024 | 3:01 PM

ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದರೆ ಮಾತ್ರ ಆಲಮಟ್ಟಿ ಡ್ಯಾಂ ಭರ್ತಿಯಾಗುತ್ತದೆ. ಕಳೆದ ವರ್ಷ ರಾಜ್ಯದಲ್ಲಿ ಬರಗಾಲವಿದ್ದು ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣ ಭರ್ತಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದ ಕಾರಣ ಆಲಮಟ್ಟಿ ಡ್ಯಾಂ ಭರ್ತಿಯಾಗಿತ್ತು. ಈ ಬಾರಿಯೂ ಆಲಮಟ್ಟಿ ಜಲಾಶಯ ಭರ್ತಿಯಾಗಲಿದೆ.

ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಹಿನ್ನೆಲೆ ವಿಜಯಪುರ (Vijayapura) ಜಿಲ್ಲೆಯ ಆಲಮಟ್ಟಿ ಡ್ಯಾಂಗೆ (Almatti Dam) ಒಳಹರಿವು ಹೆಚ್ಚಿದೆ. ಕೃಷ್ಣಾ ನದಿಯ ಉಗಮ ಸ್ಥಾನ ಮಹಾಬಲೇಶ್ವರ, ರತ್ನಾಗಿರಿ, ಚಿಪ್ಲೂನ್ ಹಾಗೂ ಇತರ ಪ್ರದೇಶಗಳಲ್ಲಿ ಉತ್ತಮ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯಕ್ಕೆ ಇಂದು (ಜು.08) 60,703 ಕ್ಯೂಸೆಕ್ ಒಳಹರಿವು ಇದ್ದು, ಕುಡಿಯುವ ನೀರು ಹಾಗೂ ವಿವಿಧ ಯೋಜನೆಗಳಿಗಾಗಿ 430 ಕ್ಯೂಸೆಕ್ ನೀರು ಹೊರಗೆ ಬಿಡಲಾಗಿದೆ. ಡ್ಯಾಂ ಭರ್ತಿಗೆ 4.54 ಮೀಟರ್ ಮಾತ್ರ ಬಾಕಿ ಇದೆ. 123 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಡ್ಯಾಂನಲ್ಲಿ 64 ಟಿಎಂಸಿ ನೀರು ಸಂಗ್ರಹವಾಗಿದೆ.
ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದರೆ ಮಾತ್ರ ಆಲಮಟ್ಟಿ ಡ್ಯಾಂ ಭರ್ತಿಯಾಗುತ್ತದೆ. ಕಳೆದ ವರ್ಷ ರಾಜ್ಯದಲ್ಲಿ ಬರಗಾಲವಿದ್ದು ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣ ಭರ್ತಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದ ಕಾರಣ ಆಲಮಟ್ಟಿ ಡ್ಯಾಂ ಭರ್ತಿಯಾಗಿತ್ತು. ಇದೀಗ ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಆಗುತ್ತಿರುವ ಕಾರಣ ಡ್ಯಾಂ ಭರ್ತಿ ಆಗುತ್ತದೆ ಎಂದು ಈ ಭಾಗದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಡ್ಯಾಂಗೆ 26 ಕ್ರಸ್ಟ್​ ಗೇಟ್​ಗಳನ್ನ ಅಳವಡಿಸಲಾಗಿದ್ದು ಯಾವುದೇ ಕ್ರಸ್ಟ್ ಗೇಟ್ ಓಪನ್ ಮಾಡಿಲ್ಲ. ಕ್ರಸ್ಟ್ ಗೇಟ್ ಓಪನ್ ಮಾಡಿದ ಬಳಿಕ ಹೆಚ್ಚಾಗಿ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ನೋಡಿ: ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More