ಮಂಡ್ಯದಲ್ಲಿ ಭಾರಿ ಮಳೆ: JSS ಶಾಲೆಗೆ ಜಲ ದಿಗ್ಬಂಧನ; ವಿದ್ಯಾರ್ಥಿಗಳಿಗೆ ರಜೆ ಘೋಷಣೆ

Edited By:

Updated on: Oct 10, 2025 | 12:32 PM

ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯದ ಕೆಲ ಬಡಾವಣೆಗಳಲ್ಲಿ ಅವಾಂತರಗಳು ನಡೆದಿವೆ. ನಗರದ ಜೆಎಸ್ಎಸ್ ಪಬ್ಲಿಕ್ ಸ್ಕೂಲ್​ನ ಮೈದಾನ ಮತ್ತು ವಾಹನಗಳು ನೀರಿನಲ್ಲಿ ಮುಳುಗಿದ್ದು, ಬಡಾವಣೆಯಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಮನೆಯ ಹೊರ ಭಾಗದಲ್ಲಿ ಎಲ್ಲಿ ನೋಡಿದರೂ ನೀರು ಕಾಣುತ್ತಿರುವ ಕಾರಣ ಹೊರಬಾರಲಾಗದೆ ನಿವಾಸಿಗಳು ಪರದಾಟ ನಡೆಸಿದ್ದಾರೆ.

ಮಂಡ್ಯ, ಅಕ್ಟೋಬರ್​ 10: ತಡರಾತ್ರಿ ಸುರಿದ ಧಾರಾಕಾರ ಮಳೆಗೆ (Rain) ಮಂಡ್ಯದ ಬೀಡಿ ಕಾಲೋನಿ ಹಾಗೂ ಕೆಹೆಚ್‌ಬಿ ಕಾಲೋನಿಯಲ್ಲಿ ಅವಾಂತರಗಳ ಸರಮಾಲೆಯೇ ನಡೆದಿದೆ. ಬಡಾವಣೆಯಲ್ಲಿನ ಮನೆಗಳಿಗೆ ನೀರು ನುಗ್ಗಿರೋದು ಒಂದೆಡೆಯಾದರೆ, ಜೆಎಸ್ಎಸ್ ಪಬ್ಲಿಕ್ ಸ್ಕೂಲ್ ಜಲಾವೃತವಾಗಿದೆ. ಶಾಲಾ ಮೈದಾನ ಮತ್ತು ವಾಹನಗಳು ನೀರಿನಲ್ಲಿ ಮುಳುಗಿದ್ದು, ಶಾಲೆಗೆ ಆಡಳಿತ ಮಂಡಳಿ ರಜೆ ಘೋಷಿಸಿದೆ. ಮನೆಯ ಹೊರ ಭಾಗದಲ್ಲಿ ಎಲ್ಲಿ ನೋಡಿದರೂ ನೀರು ಕಾಣುತ್ತಿರುವ ಕಾರಣ ಹೊರಬಾರಲಾಗದೆ ನಿವಾಸಿಗಳು ಪರದಾಟ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More