AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶವಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ; ಪ್ರವಾಹದಲ್ಲೇ ಶವ ಹೊತ್ತೈದು ಅಂತ್ಯಕ್ರಿಯೆ ಮಾಡಿದ ಜನ

ಶವಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ; ಪ್ರವಾಹದಲ್ಲೇ ಶವ ಹೊತ್ತೈದು ಅಂತ್ಯಕ್ರಿಯೆ ಮಾಡಿದ ಜನ

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 08, 2022 | 2:23 PM

Share

ಕಾವೇರಿ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ, ಕಾವೇರಿ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿದೆ. ಬಾಳೆ,‌ ಕಬ್ಬಿನ ಗದ್ದೆ, ಅಡಕೆ‌ ತೆಂಗಿನ‌ ತೋಟಕ್ಕೆ‌ ನೀರು ನುಗ್ಗಿವೆ.

ಮಂಡ್ಯ: ಕಾವೇರಿ ಪ್ರವಾಹದಿಂದ ಶವಸಂಸ್ಕಾರ (Cremation) ಮಾಡಲು ಗ್ರಾಮಸ್ಥರು ಪರದಾಡಿರುವಂತಹ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ನಡೆದಿದೆ. ಕ್ಯಾನ್ಸರ್‌ನಿಂದ ನಿನ್ನೆ ಗ್ರಾಮದಲ್ಲಿ ಸುಲೋಚನಾ(48) ಎಂಬುವವರು ಮೃತಪಟ್ಟಿದ್ದರು. ಪ್ರವಾಹದಿಂದಾಗಿ ಎದೆ ಮಟ್ಟದ ನೀರಿನಲ್ಲಿ ಗ್ರಾಮಸ್ಥರು ಶವ ಹೊತ್ತು ಸ್ಮಶಾನಕ್ಕೆ ತೆರಳಿದ್ದಾರೆ. ಕಾವೇರಿ ನದಿ ಭೋರ್ಗರೆತಕ್ಕೆ ಪ್ರತಿವರ್ಷ ಸ್ಮಶಾನದ ರಸ್ತೆ ಜಲಾವೃತವಾಗುತ್ತದೆ. ಮಹಿಳೆಯ ಶವವನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗಲು ಜನರು ಪರದಾಡಿದ್ದು, ಕೊನೆಗೆ ಪ್ರವಾಹದ ನೀರಲ್ಲೇ ಮಹಿಳೆಯ ಶವವನ್ನು ಗ್ರಾಮಸ್ಥರು ತೆಗೆದುಕೊಂಡು‌ ಹೋದರು. ಇನ್ನೂ ಕಾವೇರಿ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ, ಕಾವೇರಿ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿದೆ. ಬಾಳೆ,‌ ಕಬ್ಬಿನ ಗದ್ದೆ, ಅಡಕೆ‌ ತೆಂಗಿನ‌ ತೋಟಕ್ಕೆ‌ ನೀರು ನುಗ್ಗಿವೆ. ಹೆಚ್ಚಿನ ಪ್ರಮಾಣ ನೀರು ಬಿಟ್ಟಿರುವ ಕಾರಣ ನದಿ‌ಪಾತ್ರದಲ್ಲಿರುವ ಜನರು ಆತಂಕಗೊಂಡಿದ್ದಾರೆ. ಸದ್ಯ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಬಿಡುವು ಕೊಟ್ಟಿದೆ.

ಇದನ್ನೂ ಓದಿ: ತುಂಗಭದ್ರಾ ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್ ನೀರು ರಿಲೀಸ್: ಮತ್ತೊಮ್ಮೆ ಜಲಾವೃತವಾದ ಹಂಪಿ ಸ್ಮಾರಕಗಳು

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Aug 08, 2022 02:23 PM