ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

Edited By:

Updated on: Jun 28, 2026 | 1:40 PM

ಜಿಲ್ಲೆಯ ಕರಾವಳಿ ಭಾಗದಲ್ಲಿ ಕೇವಲ ಒಂದು ದಿನದ ಅಬ್ಬರದ ಮಳೆಗೆ ಭಾರಿ ಅವಾಂತರ ಸೃಷ್ಟಿಯಾಗಿದೆ. ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೆ ಮಳೆ ನೀರು ನುಗ್ಗುವ ಆತಂಕ ಎದುರಾಗಿದ್ದು, ಇತಿಹಾಸ ಪ್ರಸಿದ್ಧ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಚರಂಡಿ ಹೂಳು ತೆಗೆಯದ ಕಾರಣ ಇಡೀ ಗೋಕರ್ಣದ ಬೀದಿಗಳು ಹಳ್ಳದಂತಾಗಿದ್ದು, ಮಧ್ಯಾಹ್ನ 12:30ರ ನಿತ್ಯ ಮಹಾಪೂಜೆಗೂ ಅಡ್ಡಿಯಾಗಿದೆ. ಮತ್ತೊಂದೆಡೆ, ಕುಮಟಾ ತಾಲೂಕಿನ ವಾಲಗಳ್ಳಿ ಸಮೀಪ ಕುಮಟಾ-ಸಿದ್ದಾಪುರ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ. ರಸ್ತೆಯಲ್ಲೇ ನದಿಯಂತೆ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪ್ರಾಣದ ಹಂಗು ತೊರೆದು ಪರದಾಡುವಂತಾಗಿದೆ.

ಉತ್ತರ ಕನ್ನಡ, ಜೂನ್ 28: ಜಿಲ್ಲೆಯ ಕರಾವಳಿ ಭಾಗದಲ್ಲಿ ಕೇವಲ ಒಂದು ದಿನದ ಅಬ್ಬರದ ಮಳೆಗೆ ಭಾರಿ ಅವಾಂತರ ಸೃಷ್ಟಿಯಾಗಿದೆ. ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೆ ಮಳೆ ನೀರು ನುಗ್ಗುವ ಆತಂಕ ಎದುರಾಗಿದ್ದು, ಇತಿಹಾಸ ಪ್ರಸಿದ್ಧ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಚರಂಡಿ ಹೂಳು ತೆಗೆಯದ ಕಾರಣ ಇಡೀ ಗೋಕರ್ಣದ ಬೀದಿಗಳು ಹಳ್ಳದಂತಾಗಿದ್ದು, ಮಧ್ಯಾಹ್ನ 12:30ರ ನಿತ್ಯ ಮಹಾಪೂಜೆಗೂ ಅಡ್ಡಿಯಾಗಿದೆ. ಮತ್ತೊಂದೆಡೆ, ಕುಮಟಾ ತಾಲೂಕಿನ ವಾಲಗಳ್ಳಿ ಸಮೀಪ ಕುಮಟಾ-ಸಿದ್ದಾಪುರ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ. ರಸ್ತೆಯಲ್ಲೇ ನದಿಯಂತೆ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪ್ರಾಣದ ಹಂಗು ತೊರೆದು ಪರದಾಡುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us