ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು, ಮಣ್ಣು: ಮನೆಯವರ ಪ್ರಾಣ ಉಳಿಸಿತು ಮದ್ವೆ!

Edited By:

Updated on: Jun 17, 2025 | 7:32 PM

ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇದರಿಂದ ಎಲ್ಲೆಡೆ ಭೂಕುಸಿತ, ಗುಡ್ಡ ಕುಸಿಯುತ್ತಿವೆ. ಕಣ್ಣೂರಿನ ದಯಂಬುವಿನಲ್ಲಿ ಮನೆ ಮೇಲೆ ಗುಡ್ಡ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರಲಿಲ್ಲ. ಜಲಪಾತದಂತೆ ನೀರು ಹರಿದ ಪರಿಣಾಮ ಮಣ್ಣು ಸಡಿಲಗೊಂಡು ಗುಡ್ಡ ಕುಸಿದಿದ್ದು, ಪರಿಣಾಮ ನುಗ್ಗಿದ ಮಣ್ಣು, ನೀರು ನೇರವಾಗಿ ಮನೆಯ ಹಿಂಬದಿಯ ಗೋಡೆಯನ್ನು ಸೀಳಿ ಮನೆಯೊಳಗೆ ನುಗ್ಗಿದೆ. ಮನೆಯ ಸ್ಥಿತಿ ಹೇಗಾಗಿದೆ ಎನ್ನುವುದನ್ನು ವಿಡಿಯೋದಲ್ಲಿ ನೋಡಿ.

ಮಂಗಳೂರು, (ಜೂನ್ 17): ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇದರಿಂದ ಎಲ್ಲೆಡೆ ಭೂಕುಸಿತ, ಗುಡ್ಡ ಕುಸಿಯುತ್ತಿವೆ. ಕಣ್ಣೂರಿನ ದಯಂಬುವಿನಲ್ಲಿ ಮನೆ ಮೇಲೆ ಗುಡ್ಡ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರಲಿಲ್ಲ. ಜಲಪಾತದಂತೆ ನೀರು ಹರಿದ ಪರಿಣಾಮ ಮಣ್ಣು ಸಡಿಲಗೊಂಡು ಗುಡ್ಡ ಕುಸಿದಿದ್ದು, ಪರಿಣಾಮ ನುಗ್ಗಿದ ಮಣ್ಣು, ನೀರು ನೇರವಾಗಿ ಮನೆಯ ಹಿಂಬದಿಯ ಗೋಡೆಯನ್ನು ಸೀಳಿ ಮನೆಯೊಳಗೆ ನುಗ್ಗಿದೆ. ಮನೆಯ ಸ್ಥಿತಿ ಹೇಗಾಗಿದೆ ಎನ್ನುವುದನ್ನು ವಿಡಿಯೋದಲ್ಲಿ ನೋಡಿ.

Published on: Jun 17, 2025 07:29 PM
Follow Us
ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More