ನವದೆಹಲಿ: ನವದೆಹಲಿಯ ಹಲವು ಪ್ರಮುಖ ರಸ್ತೆಗಳಲ್ಲಿ ಭಾರೀ ಮಳೆಯಿಂದ ರಸ್ತೆಗಳು ಜಲಾವ್ರತವಾಗಿವೆ. ಆ ರಸ್ತೆಗಳಲ್ಲಿ ಕೋಚಿಂಗ್ ಸೆಂಟರ್ನ ವಿದ್ಯಾರ್ಥಿಗಳು ಮಳೆಯಿಂದ ಸಾವನ್ನಪ್ಪಿದ ರಾಜೇಂದ್ರ ನಗರ ಕೂಡ ಸೇರಿದೆ. ಈ ಭಾಗದಲ್ಲಿ 20 ನಿಮಿಷ ಸುರಿದ ಮಳೆಗೆ ರಸ್ತೆ ಕೆರೆಯಂತಾಗಿದ್ದು, ಸೊಂಟದವರೆಗೂ ಮಳೆ ನೀರು ನಿಂತಿದೆ. ಇದರಿಂದ ನ್ಯಾಯ ಬೇಕೆಂದು ಯುವಕರು ಕೋಚಿಂಗ್ ಸೆಂಟರ್ ಎದುರು ನಿಂತ ಮಳೆನೀರಿನಲ್ಲಿ ಕೈ ಕೈ ಹಿಡಿದು ಘೋಷಣೆ ಕೂಗುತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ