Raichur Rain: ಮಳೆ ನೀರು ನಿಂತು ಬಚ್ಚಲು ಮನೆಯಾದ ಸರ್ಕಾರಿ ಶಾಲೆ, ಸೋರುತ್ತಿರುವ ಕೊಠಡಿಯಲ್ಲೇ ಮಕ್ಕಳಿಗೆ ಬಿಸಿ ಊಟ ತಯಾರಿ

Edited By:

Updated on: Jul 23, 2023 | 11:58 AM

ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಪ್ರಾಣದ ಹಂಗು ತೊರೆದು ಶಿಥಿಲಗೊಂಡ, ಸೋರುತ್ತಿರುವ ಕೋಟೆಯಲ್ಲೇ ಅಡುಗೆ ಮಾಡುವಂತಹ ಪರಿಸ್ಥಿತಿ ಇದೆ.

ರಾಯಚೂರು, ಜುಲೈ 23: ಜಿಲ್ಲೆ ದೇವದುರ್ಗ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿದ್ದು ಶಿಥಿಲಗೊಂಡು ಸರ್ಕಾರಿ ಶಾಲೆ ಸೋರುತ್ತಿದೆ. ಮಳೆಯಿಂದ ಶಾಲೆ ಕೊಠಡಿ ಸೋರುತ್ತಿದ್ದು ಬಚ್ಚಲು ಮನೆಯಂತಾಗಿದೆ. ಸೋರುವ ಕೋಣೆಯಲ್ಲೇ ಮಕ್ಕಳಿಗೆ ಬಿಸಿಯೂಟ ತಯಾರಿಸಲಾಗುತ್ತಿದೆ. ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಪ್ರಾಣದ ಹಂಗು ತೊರೆದು ಶಿಥಿಲಗೊಂಡ, ಸೋರುತ್ತಿರುವ ಕೋಟೆಯಲ್ಲೇ ಅಡುಗೆ ಮಾಡುವಂತಹ ಪರಿಸ್ಥಿತಿ ಇದೆ.

ಕೆಲ ಕ್ಲಾಸ್ ರೂಂಗಳು ಕೂಡ ಶಿಥಿಲಗೊಂಡು ಸೋರುತ್ತಿವೆ. ಈ ಬಗ್ಗೆ ಅಧಿಕಾರಿಗಳ ವಿರುದ್ಧ ಶಾಲಾ ಶಿಕ್ಷಕರು, ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಸಮಸ್ಯೆ ಪರಿಹರಿಸದೇ ಇದ್ದರೇ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಸದ್ಯ ಅಡುಗೆ ಕೋಣೆ ಸೋರುತ್ತಿರುವ ವಿಡಿಯೋ ವೈರಲ್ ಆಗಿದೆ.

Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More