AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Mar 25, 2026 | 9:19 AM

Share

ಗದಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿದ ಈ ಭಾರೀ ಮಳೆ ಜನಜೀವನಕ್ಕೆ ತೀವ್ರ ಅಡಚಣೆ ಉಂಟುಮಾಡಿದೆ. ಮುಂಡರಗಿಯ ದಿಂಡೂರ ತಾಂಡಾದಲ್ಲಿ ಮನೆಗಳ ಮೇಲ್ಛಾವಣಿ ಹಾರಿಬಿದ್ದು ಮೂವರಿಗೆ ಗಾಯಗಳಾಗಿವೆ. ಬಿರುಗಾಳಿಯಿಂದ ಹಲವು ಮನೆಗಳಿಗೆ ಹಾನಿಯಾಗಿದ್ದು, ಮನೆಯ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಸೇರಿದಂತೆ ಅನೇಕ ವಾಹನಗಳು ಜಖಂ ಆಗಿವೆ.

ಗದಗ, ಮಾರ್ಚ್ 25: ಗದಗ ಜಿಲ್ಲೆಯ ಹಲವೆಡೆ ಕಳೆದ ರಾತ್ರಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಭಾರೀ ಅವಾಂತರ ಉಂಟಾಗಿದೆ. ಭಾರಿ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ತಾಂಡಾದಲ್ಲಿ 4ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗೆ ಹಾಕಿದ್ದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಈ ವೇಳೆ ಹಾರಿದ ಶೀಟ್‌ಗಳು ತಗುಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಪ್ಪ ಲಮಾಣಿ, ಸೋಮವ್ವ ಲಮಾಣಿ ಮತ್ತು ದೇವಲಪ್ಪ ಲಮಾಣಿ ಎಂದು ಗುರುತಿಸಲಾಗಿದೆ. ಭಾರೀ ಮಳೆ ಹಾಗೂ ಗಾಳಿಯ ಪರಿಣಾಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಸ್ಥರು ಕತ್ತಲಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us