AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು

ವಿವೇಕ ಬಿರಾದಾರ
|

Updated on: Jun 07, 2025 | 10:18 PM

Share

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಭಾರಿ ಮಳೆಯಾಗಿದ್ದು, ಬಸ್ ನಿಲ್ದಾಣ ಜಲಾವೃತಗೊಂಡಿದೆ. ಪ್ರಯಾಣಿಕರು ನೀರಿನಲ್ಲಿ ನಿಂತು ಬಸ್‌ಗಾಗಿ ಕಾಯುವಂತಾಯಿತು. ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಲಿದ್ದು, ಜೂನ್ 11ರಿಂದ ಭಾರಿ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ತಿಳಿಸಿದೆ. ಈ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದ ಜಮಖಂಡಿ ಬಸ್​ ನಿಲ್ದಾಣದೊಳಗೆ ನೀರು ನುಗ್ಗಿದ್ದು ಪ್ರಯಾಣಿಕರು ಪರದಾಡಿದರು. ನಿಲ್ದಾಣದೊಳಗೆ ನೀರು ನುಗ್ಗಿದ್ದರಿಂದ ಪ್ರಯಾಣಿಕರು ನೀರಿನಲ್ಲೇ ನಿಂತು ಬಸ್​ಗಾಗಿ ಕಾಯ್ದರು. ಕರ್ನಾಟಕದಲ್ಲಿ ಕ್ಷೀಣಿಸಿರುವ ಮುಂಗಾರು ಮತ್ತೆ ಚುರುಕಾಗಿ ಜೂ.11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 9ರಿಂದಲೇ ಮತ್ತೆ ಮಳೆಯಾಗಲಿದ್ದು, ಜೂನ್ 11ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.