Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ

ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ

ವಿವೇಕ ಬಿರಾದಾರ
|

Updated on: Oct 07, 2024 | 10:30 AM

ಭಾನುವಾರ ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಕಬ್ಬಿನಾಲೆ ಗುಡ್ಡದಿಂದ ಒಂದೇ ಸಮನೆ ನೀರು ಹರಿದ ಪರಿಣಾಮ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದೊಳಗೆ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ಥವಾಗಿದೆ.

ಪಶ್ಚಿಮಘಟ್ಟದ ತಪ್ಪಲಿನಲ್ಲಿ ಭಾನುವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಇದರಿಂದ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದೊಳಗೆ ನೀರು ನುಗ್ಗಿದೆ. ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ನೆರೆಗೆ ಎರಡು ಕಾರು, ಎರಡು ಬೈಕ್​ಗಳು ಕೊಚ್ಚಿ ಹೋಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ