ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ

ವಿವೇಕ ಬಿರಾದಾರ

Updated on: Oct 07, 2024 | 10:30 AM

ಭಾನುವಾರ ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಕಬ್ಬಿನಾಲೆ ಗುಡ್ಡದಿಂದ ಒಂದೇ ಸಮನೆ ನೀರು ಹರಿದ ಪರಿಣಾಮ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದೊಳಗೆ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ಥವಾಗಿದೆ.

ಪಶ್ಚಿಮಘಟ್ಟದ ತಪ್ಪಲಿನಲ್ಲಿ ಭಾನುವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಇದರಿಂದ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದೊಳಗೆ ನೀರು ನುಗ್ಗಿದೆ. ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ನೆರೆಗೆ ಎರಡು ಕಾರು, ಎರಡು ಬೈಕ್​ಗಳು ಕೊಚ್ಚಿ ಹೋಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.