ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಸಭೆ ವೇಳೆ ಒಳ ನುಗ್ಗಿದ ಮಳೆ ನೀರು

Edited By:

Updated on: Dec 02, 2024 | 7:03 PM

ಮಂಗಳೂರಿನ ಉರ್ವದ ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ಭಾರೀ ಮಳೆಯಿಂದ ನೀರು ನುಗ್ಗಿದೆ. ಉಪ ಲೋಕಾಯುಕ್ತರ ಅಹವಾಲು ಸ್ವೀಕಾರ ಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಧಿಕಾರಿಗಳು ಕುಳಿತಿರುವ ಸ್ಥಳಕ್ಕೆ ನೀರು ನುಗ್ಗಿದ್ದು, ಸುಮಾರು ಒಂದು ಗಂಟೆ ಭಾರೀ ಮಳೆ ಸುರಿದಿದೆ. ಫೆಂಗಲ್ ಚಂಡಮಾರುತದ ಪ್ರಭಾವ ಅಧಿಕಾರಿಗಳಿಗೂ ತಟ್ಟಿದೆ.

ಮಂಗಳೂರು, ಡಿಸೆಂಬರ್​​ 02: ಮಂಗಳೂರಿನ ಉರ್ವ ಬಳಿ ಇರುವ ಜಿಲ್ಲಾ ಪಂಚಾಯತ್ ಸಭಾಂಗಣದ ಒಳಗೆ ಮಳೆ ನೀರು ನುಗ್ಗಿದೆ. ಆ ಮೂಲಕ ಅಧಿಕಾರಿಗಳಿಗೂ ಫೆಂಗಲ್ ಚಂಡಮಾರುತದ ಎಫೆಕ್ಟ್ (Cyclone Fengal) ತಟ್ಟಿದೆ. ನೇತ್ರಾವತಿ ಸಭಾಂಗಣದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತ್ರತ್ವದಲ್ಲಿ ಅಹವಾಲು ಹಾಗೂ ಕುಂದುಕೊರತೆ ಸ್ವೀಕಾರ ಸಭೆ ನಡೆಯುತ್ತಿತ್ತು. ಈ ವೇಳೆ ಅಧಿಕಾರಿಗಳು ಕುಳಿತಿದ್ದ ಜಾಗದ ಕಡೆ ಮಳೆ ನೀರು ನುಗ್ಗಿದೆ. ಕುರ್ಚಿ ಅಡಿ ಭಾಗಕ್ಕೆ ಮಳೆ ನೀರು ನುಗಿದೆ. ಸುಮಾರು ‌ಒಂದು ಗಂಟೆ ಕಾಲ ಭಾರಿ ಮಳೆ ಸುರಿದಿದೆ. ಸದ್ಯ ಕೊಂಚ ಬಿಡುವು ನೀಡಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More