ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಜನರಿಗೆ ತಂಪೆರೆದ ವರುಣ: ಚಿಕ್ಕಮಗಳೂರು, ಬೀದರ್​​ನಲ್ಲಿ ಜೋರು ಮಳೆ

Edited By:

Updated on: Mar 17, 2024 | 9:10 PM

ಚಿಕ್ಕಮಗಳೂರು ಮತ್ತು ಬೀದರ್​ನಲ್ಲಿ ಜೋರು ಮಳೆ ಆಗಿದೆ. ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ವರುಣದೇವ ತಂಪೆರೆದಿದ್ದಾನೆ. ಐದಳ್ಳಿ, ಕಣತಿ, ಮಾಗೋಡು ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಮಳೆ ಸುರಿದಿದೆ. ಕಳೆದ ಐದು ದಿನದ ಹಿಂದೆ ಮಲೆನಾಡಿನಲ್ಲಿ ಮೊದಲ ಮಳೆಯಾಗಿತ್ತು. ಬಿಸಲಿನ ತಾಪದಿಂದ ಬಸವಳೆದಿದ್ದ ಜನತೆಗೆ ವರುಣನ ಸಿಂಚನವಾಗಿದೆ.

ಚಿಕ್ಕಮಗಳೂರು, ಮಾರ್ಚ್​​ 17: ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ವರುಣದೇವ (Rain) ತಂಪೆರೆದಿದ್ದಾನೆ. ಐದಳ್ಳಿ, ಕಣತಿ, ಮಾಗೋಡು ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಮಳೆ ಸುರಿದಿದೆ. ಸಾಧಾರಣಕ್ಕಿಂತ ಜೋರಾಗೇ ಸುರಿದ ಮಳೆಯಿಂದ ಜನರು ಸಂತಸ ಪಟ್ಟಿದ್ದಾರೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತವರಣವಿತ್ತು. ಬಿಸಿಲ ಧಗೆಗೆ ಕಾಫಿ-ಮೆಣಸು ಉಳಿಸಿಕೊಳ್ಳುವುದು ಸವಾಲಾಗಿತ್ತು. ಮಳೆಯಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಕಳೆದ ಐದು ದಿನದ ಹಿಂದೆ ಮಲೆನಾಡಿನಲ್ಲಿ ಮೊದಲ ಮಳೆಯಾಗಿತ್ತು. ಅದೇ ರೀತಿಯಾಗಿ ಬೀದರ್​ ನಗರ‌ ಸೇರಿದಂತೆ ಔರಾದ್ ತಾಲೂಕಿನ ಕೆಲವು ಕಡೆ ಮಳೆ ಆಗಿದೆ.  ಬಿಸಲಿನ ತಾಪದಿಂದ ಬಸವಳೆದಿದ್ದ ಜನತೆಗೆ ವರುಣನ ಸಿಂಚನವಾಗಿದೆ. ಜನರು ಖಷಿಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More