ಉಡುಪಿಯಲ್ಲೂ ಧಾರಾಕಾರ ಮಳೆ, ಜಿಲ್ಲಾಧಿಕಾರಿಗಳಿಂದ ಎರಡು ದಿನ ರೆಡ್ ಅಲರ್ಟ್ ಘೋಷಣೆ
ಮುಂದಿನ ಎರಡು ದಿನಗಳ ಕಾಲ ಜನ ಮನೆಯಿಂದ ಹೊರ ಬರದಿರಲು ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕಿಳಿಯುವ ದುಸ್ಸಾಹಸ ಮಾಡಬಾರದೆಂದು ಎಚ್ಚರಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಶುಕ್ರವಾರ ಸಾಯಂಕಾಲದವರೆಗೆ ಮಳೆಯಾಗಲಿದೆ.
Udupi: ಈ ವಾರವೆಲ್ಲ ಮಳೆಯಾಗಲಿದೆ. ಸೋಮವಾರದಿಂದ 5 ದಿನಗಳವರೆಗೆ ಭಾರಿ ಮಳೆಯಾಗಲಿದೆ ಭಾರತೀಯ ಹವಾಮಾನ ಮುನ್ಸೂಚನೆ ನೀಡಿದೆ ಮತ್ತು ಅದರ ಸೂಚನೆ ಪ್ರಕಾರವೇ ರಾಜ್ಯದಾದ್ಯಂತ ಮಳೆಯಾಗುತ್ತಿದೆ. ಬೆಂಗಳೂರಲ್ಲ್ಲಿ ಮಂಗಳವಾರ ಸಾಯಂಕಾಲದಿಂದ ಒಂದೇ ಸಮ ಮಳೆ ಸುರಿಯುತ್ತಿದೆ. ನಾವಿಲ್ಲಿ ಉಡುಪಿ (Udupi) ನಗರದ ದೃಶ್ಯಗಳನ್ನು ತೋರಿಸುತ್ತಿದ್ದೇವೆ. ಕರಾವಳಿ ಪ್ರದೇಶದ (coastal belt) ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ. ಮೇ 18 ಮತ್ತು 19 ರಂದು ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾ ವಿಪತ್ತ ನಿರ್ವಹಣಾ ಪ್ರಾಧಿಕಾರದ ಸಲಗೆ ಮೇರೆಗೆ ಉಡುಪು ಜಿಲ್ಲಾಧಿಕಾರಿ ಕೂರ್ಮಾರಾವ್ ಎಮ್ (Kurmarao M) ಆದೇಶ ಹೊರಡಿಸಿದ್ದಾರೆ.
ಮುಂದಿನ ಎರಡು ದಿನಗಳ ಕಾಲ ಜನ ಮನೆಯಿಂದ ಹೊರ ಬರದಿರಲು ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕಿಳಿಯುವ ದುಸ್ಸಾಹಸ ಮಾಡಬಾರದೆಂದು ಎಚ್ಚರಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಶುಕ್ರವಾರ ಸಾಯಂಕಾಲದವರೆಗೆ ಮಳೆಯಾಗಲಿದೆ. ಅದರೆ ಬುಧವಾರ ಮತ್ತು ಗುರುವಾರ ಕರಾವಳಿ ಪ್ರಾಂತ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯಲಿದೆ.
ಮಂಗಳವಾರವೂ ಉಡುಪಿಯಲ್ಲಿ ಜೋರಾಗಿ ಮಳೆಯಾಯಗುತಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ

