ಭಾರಿ ಮಳೆಗೆ ಬೆಂಗಳೂರಲ್ಲಿ ರಸ್ತೆಯಲ್ಲೇ ಹರಿದ ನೀರು: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರು ಮಹಾನಗರದ ಹಲವೆಡೆ ಸಂಜೆ ಮಳೆ ಸುರಿದಿದೆ. ವಿಧಾನಸೌಧ, ಮೆಜೆಸ್ಟಿಕ್, ಕೋರಮಂಗಲ, ಶಿವಾಜಿನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು, ದ್ವಿಚಕ್ರ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಯಿತು. ಸಂಚಾರ ದಟ್ಟಣೆ ಉಂಟಾಗಿ ಜನಜೀವನಕ್ಕೆ ತೊಂದರೆಯಾಗಿದೆ.
ಬೆಂಗಳೂರು, ಜೂನ್ 12: ಮಹಾನಗರದ ಹಲವೆಡೆ ಸಂಜೆ ಮಳೆ ಸುರಿದಿದೆ. ವಿಧಾನಸೌಧ, ಮೆಜೆಸ್ಟಿಕ್, ಕೆ.ಆರ್. ವೃತ್ತ, ಕೆ.ಆರ್. ಮಾರುಕಟ್ಟೆ, ಕಾರ್ಪೊರೇಷನ್, ಶಾಂತಿನಗರ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಟೌನ್, ಆಡುಗೋಡಿ, ರಾಜಾಜಿನಗರ, ಮಲ್ಲೇಶ್ವರಂ, ಬಸವೇಶ್ವರನಗರ, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಂಡುಬಂತು. ಮಳೆ ಶುರುವಾಗುತ್ತಿದ್ದಂತೆ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮುಖ್ಯವಾಗಿ, ದ್ವಿಚಕ್ರ ವಾಹನ ಸವಾರರು ಮಳೆನೀರಿನಲ್ಲಿ ಪರದಾಡುತ್ತಿರುವ ದೃಶ್ಯಗಳು ಕಂಡುಬಂತು. ಸಂಜೆ ಕಚೇರಿ ಮುಗಿಸಿ ಮನೆಗೆ ಹೊರಟಿದ್ದ ಸಾರ್ವಜನಿಕರೂ ಸಹ ಮಳೆಯಿಂದಾಗಿ ತೊಂದರೆಗೊಳಗಾಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
