ಗದಗ ಜಿಲ್ಲೆಯಲ್ಲಿ ಮಳೆ ಆರ್ಭಟ: ಲಕ್ಷ್ಮೇಶ್ವರ ಪಟ್ಟಣದ ರಸ್ತೆಗಳು ಜಲಾವೃತ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಭಾರೀ ಮಳೆಯ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಗೆ ಕೆಂಚಲಾಪುರ ಓಣಿ ಮತ್ತು ಬನಶಂಕರಿ ದೇಗುಲ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಮಳೆಯ ಜೊತೆಗೆ ಗಾಳಿಯ ವೇಗ ಹೆಚ್ಚಾಗಿದ್ದರಿಂದ ಹಲವೆಡೆ ಮರಗಳು ನೆಲಕ್ಕುರುಳಿವೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ಗದಗ, ಮೇ 18: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಭಾನುವಾರ ಸಂಜೆ ಸುರಿದ ವರ್ಷಧಾರೆಗೆ ಹಲವು ಅವಾಂತರಗಳಾಗಿವೆ. ಧಾರಾಕಾರ ಮಳೆಗೆ ಪಟ್ಟಣದ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಕೆಂಚಲಾಪುರ ಓಣಿ ಮತ್ತು ಬನಶಂಕರಿ ದೇಗುಲ ರಸ್ತೆಗಳಲ್ಲಿ ಮೊಣಕಾಲ ಮಟ್ಟದ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ. ಮಳೆಯ ಜೊತೆಗೆ ಬೀಸಿದ ಭಾರೀ ಗಾಳಿಗೆ ಹಲವೆಡೆ ಮರಗಳು ನೆಲಕ್ಕುರುಳಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us

