Assembly Polls: ದೆಹಲಿಯಿಂದ ಜೋಲುಮೋರೆ ಹಾಕಿಕೊಂಡು ಬೆಂಗಳೂರಿಗೆ ವಾಪಸ್ಸಾದ ಸಿದ್ದರಾಮಯ್ಯ ನಿವಾಸ ಇಂದು ಚಟುವಟಿಕೆಯ ಕೇಂದ್ರ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 18, 2023 | 4:28 PM

ಆದರೆ, ಖುದ್ದು ಸಿದ್ದರಾಮಯ್ಯ ಚಿಂತೆಯಲ್ಲಿದ್ದಾರೆ. ಮೂಲಗಳ ಪ್ರಕಾರ ಅವರನ್ನು ಕೋಲಾರ ಬದಲು ವರುಣಾದಿಂದ ಸ್ಪರ್ಧಿಸುವಂತೆ ಸೂಚಿಸಲಾಗಿದೆ. ಅವರ ಮನೆಯಲ್ಲಿ ಏನೆಲ್ಲ ಚರ್ಚೆಯಾಗುತ್ತಿದೆ ಅಂತ ಇನ್ನೂ ಗೊತ್ತಾಗಿಲ್ಲ

ಬೆಂಗಳೂರು: ನವದೆಹಲಿಯಲ್ಲಿ ನಿನ್ನೆ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ನಡೆಯಿತು. ಯುಗಾದಿ ಹಬ್ಬದ ಬಳಿಕ ವಿಧಾನಸಭಾ ಚುನಾಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಪ್ರಕಟಿಸಲಾಗುವ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಅಲ್ಲಿಂದ ವಾಪಸ್ಸಾಗಿರುವ ಹಿರಿಯ ನಾಯಕ ಸಿದ್ದರಾಮಯ್ಯನವರ (Siddaramaiah) ನಿವಾಸ ಚಟುವಟಿಕೆಯ ಕೇಂದ್ರವಾಗಿದೆ. ಪಕ್ಷದ ಹಲಾವಾರು ನಾಯಕರು ಅಲ್ಲಿಗೆ ಆಗಮಿಸುತ್ತಿದ್ದಾರೆ. ಆದರೆ, ಖುದ್ದು ಸಿದ್ದರಾಮಯ್ಯ ಚಿಂತೆಯಲ್ಲಿದ್ದಾರೆ. ಮೂಲಗಳ ಪ್ರಕಾರ ಅವರನ್ನು ಕೋಲಾರ ಬದಲು ವರುಣಾದಿಂದ ಸ್ಪರ್ಧಿಸುವಂತೆ ಸೂಚಿಸಲಾಗಿದೆ. ಅವರ ಮನೆಯಲ್ಲಿ ಏನೆಲ್ಲ ಚರ್ಚೆಯಾಗುತ್ತಿದೆ ಅಂತ ಇನ್ನೂ ಗೊತ್ತಾಗಿಲ್ಲ ಮಾರಾಯ್ರೇ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 18, 2023 04:28 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.