Video: ಮೈಯಿಂದ ತೊಟ್ಟಿಕ್ಕುತ್ತಿತ್ತು ರಕ್ತ, ಅಸಹಾಯಕ ಸ್ಥಿತಿಯಲ್ಲಿ ಕುಳಿತ ನೇಪಾಳ ಮಾಜಿ ಪ್ರಧಾನಿ ಶೇರ್ ಬಹದ್ದೂರ್

Updated on: Sep 10, 2025 | 8:17 AM

ನೇಪಾಳದ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ ಬಳಿಕವೂ ಶಾಂತ ಸ್ಥಿತಿ ಮರಳಲಿಲ್ಲ, ಪ್ರತಿಭಟನಾಕಾರರು ಹಿಂಸಾಚಾರವನ್ನು ಮುಂದುವರೆಸಿದ್ದಾರೆ. ಮಾಜಿ, ಸಚಿವರು, ಮಾಜಿ ಪ್ರಧಾನಿಗಳು ಎಲ್ಲರ ಮೇಲೂ ಹಲ್ಲೆ ನಡೆಸಲಾಗಿದೆ. ಸಂಸತ್ ಭವನ, ಮಾಜಿ ಪ್ರಧಾನಿಗಳ ಮನೆ ಸೇರಿ ಹಲವರ ಮನೆಯನ್ನು ಭಸ್ಮಗೊಳಿಸಿದ್ದಾರೆ. ಮಾಜಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಮೇಲೂ ಹಲ್ಲೆ ನಡೆಸಿದ್ದು, ಮೈಯಿಂದ ರಕ್ತ ತೊಟ್ಟಿಕ್ಕುತ್ತಿದೆ, ಅಸಹಾಯಕರಾಗಿ ಒಂದೆಡೆ ಕುಳಿತಿದ್ದಾರೆ.

ಕಠ್ಮಂಡು, ಸೆಪ್ಟೆಂಬರ್ 10: ನೇಪಾಳದ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ ಬಳಿಕವೂ ಶಾಂತ ಸ್ಥಿತಿ ಮರಳಲಿಲ್ಲ, ಪ್ರತಿಭಟನಾಕಾರರು ಹಿಂಸಾಚಾರವನ್ನು ಮುಂದುವರೆಸಿದ್ದಾರೆ. ಮಾಜಿ, ಸಚಿವರು, ಮಾಜಿ ಪ್ರಧಾನಿಗಳು ಎಲ್ಲರ ಮೇಲೂ ಹಲ್ಲೆ ನಡೆಸಲಾಗಿದೆ. ಸಂಸತ್ ಭವನ, ಮಾಜಿ ಪ್ರಧಾನಿಗಳ ಮನೆ ಸೇರಿ ಹಲವರ ಮನೆಯನ್ನು ಭಸ್ಮಗೊಳಿಸಿದ್ದಾರೆ. ಮಾಜಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಮೇಲೂ ಹಲ್ಲೆ ನಡೆಸಿದ್ದು, ಮೈಯಿಂದ ರಕ್ತ ತೊಟ್ಟಿಕ್ಕುತ್ತಿದೆ, ಅಸಹಾಯಕರಾಗಿ ಒಂದೆಡೆ ಕುಳಿತಿದ್ದಾರೆ. ಬಳಿಕ ಸೇನೆಯು ಪ್ರತಿಭಟನಾಕಾರರಿಂದ ಅವರನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ.ಬುಡನಿಲ್ಕಾಂತದಲ್ಲಿರುವ ದೇವುಬಾ ಅವರ ನಿವಾಸಕ್ಕೆ ನುಗ್ಗಿ, ಮನೆಗೆ ಬೆಂಕಿ ಹಚ್ಚಿದ್ದಾರೆ. ಜೀವ ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಮನೆಯಿಂದ ಹೊರಗೆ ಓಡಿದ್ದಾರೆ. ಅಲ್ಲಿ ಅವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Sep 10, 2025 08:12 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More