ಬುರ್ಕಾ ಧರಿಸಿ ಡ್ರಗ್ಸ್ ಪಾರ್ಟಿ ಕೇಸ್​ ವಿಚಾರಣೆಗೆ ಬಂದ ನಟಿ ಹೇಮಾ; ಬಂಧಿಸಿದ ಪೊಲೀಸರು

ಬೆಂಗಳೂರಿನಲ್ಲಿ ನಡೆದ ರೇವ್​ ಪಾರ್ಟಿಯಲ್ಲಿ ಹೇಮಾ ಭಾಗಿ ಆಗಿದ್ದರು. ಈ ಕೇಸ್​ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಾಗ ಹೇಮಾ ಬುರ್ಕಾ ಧರಿಸಿ ಬಂದಿದ್ದಾರೆ. ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜನರ ಕಣ್ಣಿನಿಂದ ತಪ್ಪಿಸಿಕೊಳ್ಳಲು ಹೇಮಾ ಇಲ್ಲಸಲ್ಲದ ಸರ್ಕಸ್​ ಮಾಡುತ್ತಿದ್ದಾರೆ. ಬಂಧನದ ಬಳಿಕ ಕೆ.ಸಿ. ಜನರಲ್​ ಆಸ್ಪತ್ರೆಯಲ್ಲಿ ಅವರ ಮೆಡಿಕಲ್​ ಟೆಸ್ಟ್​ ಮಾಡಿಸಲಾಗಿದೆ.

ಬುರ್ಕಾ ಧರಿಸಿ ಡ್ರಗ್ಸ್ ಪಾರ್ಟಿ ಕೇಸ್​ ವಿಚಾರಣೆಗೆ ಬಂದ ನಟಿ ಹೇಮಾ; ಬಂಧಿಸಿದ ಪೊಲೀಸರು
| Updated By: ಮದನ್​ ಕುಮಾರ್​

Updated on: Jun 03, 2024 | 7:18 PM

ರೇವ್​ ಪಾರ್ಟಿ ವಿವಾದದಲ್ಲಿ ಸಿಲುಕಿದ ತೆಲುಗು ನಟಿ ಹೇಮಾ ಅವರಿಗೆ ಈಗ ಸಂಕಷ್ಟ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಹೇಮಾರನ್ನು ಅರೆಸ್ಟ್​ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಜಿ.ಆರ್​. ಫಾರ್ಮ್​ಹೌಸ್​ನಲ್ಲಿ ರೇವ್​ ಪಾರ್ಟಿ ಮಾಡಿದ ಆರೋಪದಲ್ಲಿ ಅವರ ಬಂಧನ (Hema Arrest) ಆಗಿದೆ. ಈ ಕೇಸ್​ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ 2 ಬಾರಿ ನೋಟಿಸ್​ ನೀಡಲಾಗಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ಇಂದು (ಜೂನ್​ 3) ಬುರ್ಕಾ ಧರಿಸಿ ಹೇಮಾ ಬಂದಿದ್ದಾರೆ. ಜನರಿಗೆ ಮುಖ ಕಾಣಬಾರದು ಎಂಬ ಉದ್ದೇಶದಿಂದ ಅವರು ಬುರ್ಕಾ ಧರಿಸಿದ್ದಾರೆ. ಪಾರ್ಟಿಯಲ್ಲಿ ಹೇಮಾ (Hema) ಡ್ರಗ್ಸ್​ ಸೇವಿಸಿದ್ದರು ಎಂಬುದು ವೈದ್ಯಕೀಯ ವರದಿಯಲ್ಲಿ ಖಚಿತವಾಗಿದೆ. ಅಲ್ಲದೇ ಡ್ರಗ್ಸ್​ ಪಾರ್ಟಿಯಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು ಎಂಬ ಮಾಹಿತಿ ಇದೆ. ರೇವ್​ ಪಾರ್ಟಿ (Bengaluru Rave Party) ನಡೆದ ಸ್ಥಳದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾಗಲೂ ಹೇಮಾ ಕಳ್ಳಾಟ ಆಡಿದ್ದರು. ಅದೇ ಫಾರ್ಮ್​ಹೌಸ್​ನ ಆವರಣದಲ್ಲಿ ವಿಡಿಯೋ ಮಾಡಿ, ‘ನಾನು ಹೈದರಾಬಾದ್​ನ ಫಾರ್ಮ್​ಹೌಸ್​ನಲ್ಲಿ ಇದ್ದೇನೆ. ಯಾವ ರೇವ್​ ಪಾರ್ಟಿಗೂ ಹೋಗಿಲ್ಲ’ ಎಂದು ಸುಳ್ಳು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್