Hassan: ಲಕ್ಕುಂದ ಗ್ರಾಮಕ್ಕೆ ದಾಳಿಯಿಟ್ಟ ಕಾಡಾನೆ ಹಿಂಡು, ನಿವಾಸಿಯೊಬ್ಬರ ಮನೆ ಕಂಪೌಂಡ್ ಮತ್ತು ತೋಟ ಧ್ವಂಸ

ಅರುಣ್​ ಕುಮಾರ್​ ಬೆಳ್ಳಿ

Updated on: Jul 08, 2023 | 10:25 AM

ಯಾವುದಾದರೂ ದೊಡ್ಡ ಅನಾಹುತ, ದುರದೃಷ್ಟಕರ ಘಟನೆ ಸಂಭವಿಸುವ ಮೊದಲು ಅಧಿಕಾರಿಗಳು ಆನೆ ಹಿಂಡನ್ನು ಕಾಡಿಗಟ್ಟಬೇಕೆಂದು ಜನ ಆಗ್ರಹಿಸಿದ್ದಾರೆ.

ಹಾಸನ: ಕಾಡಾನೆಗಳ ಯೋಚನೆ ಯಾಕೆ ಜನರಲ್ಲಿ ಭೀತಿ ಹುಟ್ಟಿಸುತ್ತದೆ ಅಂದರೆ ಕಾರಣ ಇಲ್ಲಿದೆ ಮಾರಾಯ್ರೇ. ಜಿಲ್ಲೆಯ ಬೇಲೂರು ತಾಲ್ಲೂಕಿನ ಲಕ್ಕುಂದ ಹೆಸರಿನ ಗ್ರಾಮಕ್ಕೆ ನುಗ್ಗಿರುವ ಕಾಡಾನೆಗಳು (wild elephants) ಲಕ್ಷ್ಮಮ್ಮ (Lakshmamma) ಎನ್ನುವವರ ಮನೆ ಕಂಪೌಂಡ್ ಮತ್ತು ತೋಟವನ್ನು ಧ್ವಂಸ ಮಾಡಿವೆ. ಸ್ಥಳೀಯರು ಹೇಳುವಂತೆ ಆನೆಯೊಂದು ತನ್ನ ಮರಿಗಳೊಂದಿಗೆ ಗ್ರಾಮದ ಬಳಿ ಬೀಡು ಬಿಟ್ಟಿದೆ ಮತ್ತು ರಾತ್ರಿ ಸಮಯದಲ್ಲಿ ಅವು ಸುತ್ತಮುತ್ತಲಿನ ಗ್ರಾಮಗಳಿಗೆ ನುಗ್ಗುತ್ತಿವೆ. ನಿವಾಸಿಗಳು ಅರಣ್ಯ ಇಲಾಖೆಯ ಸಿಬ್ಬಂದಿಗೆ ವಿಷಯ ತಿಳಿಸಿದ್ದುಂಟು. ಆದರೆ, ಅವರಿಂದ ಇದುವರೆಗೆ ಯಾವುದೇ ಕ್ರಮ ಜರುಗಿಲ್ಲ. ಯಾವುದಾದರೂ ದೊಡ್ಡ ಅನಾಹುತ, ದುರದೃಷ್ಟಕರ ಘಟನೆ ಸಂಭವಿಸುವ ಮೊದಲು ಅಧಿಕಾರಿಗಳು ಆನೆ ಹಿಂಡನ್ನು ಕಾಡಿಗಟ್ಟಬೇಕೆಂದು ಜನ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.