ಸುಹಾಸ್ ಶೆಟ್ಟಿ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ಮಂಗಳೂರು ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ನಿನ್ನೆ(ಮೇ 01) ರಾತ್ರಿ ಸ್ನೇಹಿತರ ಜೊತೆ ಇನ್ನೋವಾ ಕಾರಿನಲ್ಲಿ ಸುಹಾಸ್ ಶೆಟ್ಟಿ ಬರ್ತಿದ್ದ.. ಇದನ್ನ ಗಮನಿಸಿದ್ದ ಹಂತಕರು ಮೀನಿನ ಟೆಂಪೋ, ಸ್ವಿಫ್ಟ್ ಕಾರಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಹಾಗೆ ಬಂದವರು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಮೀನಿನ ಟೆಂಪೋದಿಂದ ಡಿಕ್ಕಿ ಹೊಡೆದಿದ್ದಾರೆ.
ಮಂಗಳೂರು, (ಮೇ 02): ಕರಾವಳಿಯಲ್ಲಿ ಮತ್ತೆ ರಕ್ತದೋಕುಳಿ ಹರಿದಿದೆ. 2 ವರ್ಷಗಳ ಹಿಂದೆ ಸುರತ್ಕಲ್ನಲ್ಲಿ ನಡೆದಿದ್ದ ಫಾಜಿಲ್ ಎಂಬಾತನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಂಗಳೂರು ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ನಿನ್ನೆ(ಮೇ 01) ರಾತ್ರಿ ಸ್ನೇಹಿತರ ಜೊತೆ ಇನ್ನೋವಾ ಕಾರಿನಲ್ಲಿ ಸುಹಾಸ್ ಶೆಟ್ಟಿ ಬರ್ತಿದ್ದ.. ಇದನ್ನ ಗಮನಿಸಿದ್ದ ಹಂತಕರು ಮೀನಿನ ಟೆಂಪೋ, ಸ್ವಿಫ್ಟ್ ಕಾರಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಹಾಗೆ ಬಂದವರು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಮೀನಿನ ಟೆಂಪೋದಿಂದ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಸ್ವಿಫ್ಟ್ ಕಾರಿನಿಂದ ಇಳಿದ ದುಷ್ಕರ್ಮಿಗಳು ಸುಹಾಸ್ ಶೆಟ್ಟಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
Published on: May 02, 2025 05:48 PM