‘ಬಾಸ್ ಬಾಸ್’ ಎಂದು ಹೋಗಿದ್ದೇ ತಪ್ಪಾಯ್ತು; ಕೊಲೆ ಕೇಸ್​ನಲ್ಲಿ ಪ್ರದೋಶ್ ಸಿಕ್ಕಿಬಿದ್ದಿದ್ದೇ ವಿಚಿತ್ರ

Updated on: Jul 22, 2024 | 8:24 AM

ರೇಣುಕಾ ಸ್ವಾಮಿ ಕೊಲೆ ನಡೆಯುವ ಮುಂಚೆ ನಟ ದರ್ಶನ್ ಹಾಗೂ ಇನ್ನೂ ಕೆಲವರು, ಪ್ರಕರಣದ ಮತ್ತೊಬ್ಬ ಆರೋಪಿ ವಿನಯ್ ಒಡೆತನದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್​ನಲ್ಲಿ ಕುಡಿದು ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಸಹ ಇದ್ದರು. ನಟ ದರ್ಶನ್ ಪಟ್ಟಣಗೆರೆ ಶೆಡ್​ಗೆ ಹೋಗುವಾಗ ಚಿಕ್ಕಣ್ಣರನ್ನು ಸಹ ಕರೆದರಂತೆ. ಆದರೆ ಚಿಕ್ಕಣ್ಣ ದರ್ಶನ್​ ಜೊತೆ ಹೋಗಲು ಒಪ್ಪಿಲ್ಲ.

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಆಗುವುದಕ್ಕೂ ಮೊದಲು ಬೆಂಗಳೂರಿನ ಆರ್​ಆರ್​ ನಗರದಲ್ಲಿರುವ ಸ್ಟೋನಿ ಬ್ರೂಕ್​ ​ ರೆಸ್ಟೋರೆಂಟ್​ನಲ್ಲಿ ಪಾರ್ಟಿ ಮಾಡುತ್ತಿದ್ದರು. ಈ ಪಾರ್ಟಿಯಲ್ಲಿ ಚಿಕ್ಕಣ್ಣ, ಪ್ರದೋಶ್ ಸೇರಿ ಅನೇಕರು ಇದ್ದರು. ದರ್ಶನ್ ಅವರು ತಮಗೆ ವೈಯಕ್ತಿಕ ಕೆಲಸ ಇದೆ ಎಂದು ರೆಸ್ಟೋರೆಂಟ್​ನಿಂದ ಶೆಡ್​ನತ್ತ ಹೊರಡುವವರಿದ್ದರು. ಈ ವೇಳೆ ಚಿಕ್ಕಣ್ಣ ಅವರು ದರ್ಶನ್ ಕಾರು ಹತ್ತಲಿಲ್ಲ. ಆದರೆ, ಪ್ರದೋಶ್ ಮಾತ್ರ ‘ಬಾಸ್ ನಾನೂ ಬರ್ತಿನಿ’ ಎಂದು ಕಾರು ಏರಿದರು. ಈ ಕಾರಣಕ್ಕೆ ಅವರು ಕೂಡ ಲಾಕ್ ಆದರು. ದರ್ಶನ್ ಜೊತೆ ಇದ್ದಿದ್ದಕ್ಕೆ ಪ್ರದೋಶ್ ಕೂಡ ಈಗ ಅರೆಸ್ಟ್ ಆಗಿದ್ದಾರೆ. ಕೊಲೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನವನ್ನೂ ಇವರೇ ತೆಗೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More