ಪುನೀತ್ ಬಂದಾಗ ಮಂತ್ರಾಲಯದ ರಾಯರ ವೀಣೆ ಬಿದ್ದಿದ್ಯಾಕೆ? ಶ್ರೀಗಳು ಹೇಳಿದ್ದಿಷ್ಟು
ಪುನೀತ್ ರಾಜ್ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಹೀಗಾಗಿ ಅನೇಕ ಬಾರಿ ಅವರು ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ಒಮ್ಮೆ ಪುನೀತ್ ಆಗಮಿಸಿದಾಗ ತೊಟ್ಟಿಲು, ವೀಣೆ ಅಲುಗಾಡಿತ್ತು.
ಮಂತ್ರಾಲಯಕ್ಕೆ ಪುನೀತ್ ರಾಜ್ಕುಮಾರ್ ಭೇಟಿ ನೀಡಿದ ಸಂದರ್ಭದಲ್ಲಿ ತೊಟ್ಟಿಲು ಮತ್ತು ವೀಣೆ ಅಲುಗಾಡಿತ್ತು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ಸಾವಿಗೂ ಇದಕ್ಕೂ ಸಂಬಂಧ ಇರುವಂತೆ ಊಹಾಪೋಹ ಹಬ್ಬಿಸಿದ್ದಾರೆ. ಈ ಬಗ್ಗೆ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಮಾತನಾಡಿದ್ದು, ಅವರ ಸಾವಿಗೂ ಇದಕ್ಕೂ ಸಂಬಂಧವಿಲ್ಲ. ಅದು ಆಕಸ್ಮಿಕವಾಗಿ ಆಗಿರುವ ಘಟನೆ ಎಂದು ಹೇಳಿದ್ದಾರೆ.
ಪುನೀತ್ ರಾಜ್ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಹೀಗಾಗಿ ಅನೇಕ ಬಾರಿ ಅವರು ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ಒಮ್ಮೆ ಪುನೀತ್ ಆಗಮಿಸಿದಾಗ ತೊಟ್ಟಿಲು, ವೀಣೆ ಅಲುಗಾಡಿತ್ತು. ಯಾರೂ ಕೂಡಾ ಅನ್ಯತಾ ಭಾವಿಸವಾರದು. ಇದೊಂದು ಕಾಕತಾಳೀಯ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಲೋಹಿತಾಶ್ವ ಎಂದರೆ ಅಲ್ಪಾಯುಶಿ; ಪುನೀತ್ ಹೆಸರು ಬದಲಾವಣೆಗೆ ಕಾರಣವಾಗಿತ್ತು ಈ ವಿಚಾರ
Loading...
Unable to load recommendations.
Follow Us
