ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ ಅನೇಕರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರು ಎಂಬುದು ವಿಚಾರಣೆ ಬಳಿಕ ತಿಳಿದು ಬರಬೇಕಿದೆ. ಈ ಮಧ್ಯೆ ನಟ ಚಿಕ್ಕಣ್ಣ ಅವರನ್ನು ಕರೆಸಿ ಪೊಲೀಸರು ವಿಚಾರಣೆ ಮಾಡಿದ್ದರು. ಅವರು ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿಯಾದ ಕಾರಣ ಅವರನ್ನು ವಿಚಾರಣೆ ಮಾಡಲಾಗಿದೆ. ಇನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ವಿಚಾರಣೆ ಎದುರಿಸಿದ್ದಾರೆ. ಕೊಲೆ ನಡೆದ ಮರುದಿನ ದರ್ಶನ್ ಅವರು ಪತ್ನಿ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ಕಾರಣದಿಂದಲೇ ವಿಜಯಲಕ್ಷ್ಮಿ ಅವರನ್ನು ವಿಚಾರಣೆ ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: