‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?

Updated on: Jun 29, 2024 | 7:49 AM

ದರ್ಶನ್ ಪ್ರಕರಣದಲ್ಲಿ ಅನೇಕರು ಮೌನ ತಾಳಿದ್ದಾರೆ. ಅವರನ್ನು ಮಗ ಎಂದೇ ಕರೆಯುತ್ತಿದ್ದ ಸುಮಲತಾ ಅಂಬರೀಷ್​ ಈಗ ಮೌನ ತಾಳಿದ್ದಾರೆ. ರಾಕ್​ಲೈನ್ ವೆಂಕಟೇಶ್ ಕೂಡ ಈ ಪ್ರಕರಣದ ಬಗ್ಗೆ ಮಾತನಾಡಿಲ್ಲ. ಈ ಮೌನ ಏಕೆ ಎಂಬ ಪ್ರಶ್ನೆಗೆ ನಿರ್ಮಾಪಕ ಸಾರಾ ಗೋವಿಂದು ಮಾತನಾಡಿದ್ದಾರೆ.

ದರ್ಶನ್ ಪ್ರಕರಣದಲ್ಲಿ ಅನೇಕರು ಮೌನ ತಾಳಿದ್ದಾರೆ. ದರ್ಶನ್ ಅವರನ್ನು ಮಗ ಎಂದೇ ಕರೆಯುತ್ತಿದ್ದ ಸುಮಲತಾ ಅಂಬರೀಷ್​ ಅವರು ಮೌನ ತಾಳಿದ್ದಾರೆ. ರಾಕ್​ಲೈನ್ ವೆಂಕಟೇಶ್ ಕೂಡ ಈ ಪ್ರಕರಣದ ಬಗ್ಗೆ ಮಾತನಾಡಿಲ್ಲ. ಈ ಮೌನ ಏಕೆ ಎಂಬ ಪ್ರಶ್ನೆಗೆ ನಿರ್ಮಾಪಕ ಸಾರಾ ಗೋವಿಂದು ಮಾತನಾಡಿದ್ದಾರೆ. ‘ಮೊದಲು ಮುಂದೆ ಬರಬೇಕಾಗಿದ್ದು ಕಲಾವಿದರ ಸಂಘ. ಎಲ್ಲರಿಗೂ ನೋವಿದೆ. ಆದರೆ, ಬಹಿರಂಗವಾಗಿ ಹೇಳಿಕೊಳ್ಳಲು ಮುಜುಗರ ಪಡುತ್ತಿದ್ದಾರೆ. ಇಡೀ ಚಿತ್ರರಂಗ ಸೇರಬೇಕು. ಎಲ್ಲರೂ ಒಟ್ಟಾಗಿ ಮುಂದೆ ಬರಬೇಕು. ರಾಕ್​ಲೈನ್ ಬಂದಿದ್ದರೆ ಸಮಸ್ಯೆ ಬಗೆಹರಿಯುತ್ತಿತ್ತು’ ಎಂದಿದ್ದಾರೆ ಸಾರಾ ಗೋವಿಂದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More