ಕೊಲ್ಲೂರಿಗೇ ಬಂದು ವಿಜಯಲಕ್ಷ್ಮೀ ಅವರು ನವ ಚಂಡಿಕಾ ಹೋಮ ಮಾಡಿಸಿದ್ದೇಕೆ?

Updated on: Jul 26, 2024 | 11:30 AM

ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಈ ಪೂಜೆಯ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ.

ವಿಜಯಲಕ್ಷ್ಮೀ ಅವರು ಪತಿ ದರ್ಶನ್ ಅವರನ್ನು ಜೈಲಿನಿಂದ ಹೊರಕ್ಕೆ ಕರೆತರಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಇದು ಅವರನ್ನು ಸಾಕಷ್ಟು ಚಿಂತೆಗೀಡು ಮಾಡಿದೆ. ಹೀಗಾಗಿ ವಿಜಯಲಕ್ಷ್ಮೀ ಬೇರೆ ಬೇರೆ ದೇವರ ಮೊರೆ ಹೋಗುತ್ತಿದ್ದಾರೆ. ಜೂನ್ 25ರಂದು ಅವರು ಕೊಲ್ಲುರೂ ದೇವಸ್ಥಾನಕ್ಕೆ ತೆರಳಿದ್ದರು. ಇಂದು (ಜುಲೈ 26) ಅವರು ನವಚಂಡಿಕಾ ಯಾಗ ಮಾಡಿಸಿದ್ದಾರೆ. ಆಶಾಢಮಾಸದಲ್ಲಿ ಈ ಪೂಜೆ ಮಾಡಿಸಿರೋದು ಮುಖ್ಯ ಆಗುತ್ತದೆ. ಸಂಕಷ್ಟ ನಿವಾರಣೆ ಈ ಪೂಜೆ ಮಾಡಿಸುತ್ತಾರೆ. ಬೆಳಿಗ್ಗೆ 6.30 ಸುಮಾರಿಗೆ ಪೂಜೆ ಆರಂಭ ಆಗಿದ್ದು, 9.30 ವೇಳೆಗೆ ಪೂಜೆ ಮುಗಿದಿದೆ. ಸಂಕಷ್ಟ ಸಮಯದಲ್ಲಿ ಈ ಪೂಜೆಯನ್ನು ಇಲ್ಲಿ ಮಾಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More