AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡೆವಿಲ್’ ಸುದ್ದಿಗೋಷ್ಠಿಗೆ ವಿಜಯಲಕ್ಷ್ಮೀ ಬಂದಿಲ್ಲವೇಕೆ? ಉತ್ತರಿಸಿದ ಪ್ರಕಾಶ್

‘ಡೆವಿಲ್’ ಸುದ್ದಿಗೋಷ್ಠಿಗೆ ವಿಜಯಲಕ್ಷ್ಮೀ ಬಂದಿಲ್ಲವೇಕೆ? ಉತ್ತರಿಸಿದ ಪ್ರಕಾಶ್

ರಾಜೇಶ್ ದುಗ್ಗುಮನೆ
|

Updated on: Dec 03, 2025 | 10:51 AM

Share

‘ಡೆವಿಲ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಗಲಿದೆ. ಈ ಚಿತ್ರದ ಸುದ್ದಿಗೋಷ್ಠಿ ಡಿಸೆಂಬರ್ 2ರಂದು ನಡೆಯಿತು. ಈ ವೇಳೆ ವಿಜಯಲಕ್ಷ್ಮೀ ಅವರು ಏಕೆ ಬಂದಿಲ್ಲ ಎಂಬುದಕ್ಕೆ ನಿರ್ದೇಶಕ ಪ್ರಕಾಶ್ ಸ್ಪಷ್ಟನೆ ನೀಡಿದ್ದಾರೆ.

‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ನಡೆಯಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಡಿಸೆಂಬರ್ 2ರಂದು ನಡೆದಿದೆ. ವಿಜಯಲಕ್ಷ್ಮೀ ಅವರು ಪ್ರತಿ ಹಂತದಲ್ಲೂ ಚಿತ್ರಕ್ಕೆ ಬೆಂಬಲವಾಗಿದ್ದಾರೆ. ಆದರೆ, ಸುದ್ದಿಗೋಷ್ಠಿಗೆ ಬಂದಿಲ್ಲ. ಇದಕ್ಕೆ ಕಾರಣ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಪ್ರಕಾಶ್ ಅವರು, ‘ಇದು ಅವರ ಆಯ್ಕೆ. ಬಹುಶಃ ಅವರು ನಗರದಲ್ಲಿಯೂ ಇಲ್ಲ ಅನಿಸುತ್ತದೆ. ಅವರು ಚಿತ್ರಕ್ಕೆ ಒಳ್ಳೆಯ ರೀತಿಯಲ್ಲಿ ಬೆಂಬಲವಾಗಿ ನಿಂತಿದ್ದಾರೆ’ ಎಂದಿದ್ದಾರೆ. ಇದರ ಸಂಪೂರ್ಣ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More