ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್

Updated on: May 19, 2025 | 10:25 PM

ನಿನ್ನೆ(ಮೇ 18) ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ಅಷ್ಟ ದಿಕ್ಕುಗಳಲ್ಲೂ ಮಳೆಯಾಗಿದ್ದು, ವಾರದ ಮೊದಲ ದಿನವೇ ಸಿಟಿ ಮಂದಿಗೆ ಕಿರಿಕಿರಿ ಉಂಟಾಗಿದೆ. ನಗರದ ರಸ್ತೆಗಳ ಮೇಲೆ ಭಾರೀ ಪ್ರಮಾಣದ ಮಳೆ ನೀರು ನಿಂತುಕೊಂಡಿದ್ದು, ಕರೆಗಳಂತಾಗಿವೆ. ಮಳೆ ನಿಂತಿದ್ದರು. ರಸ್ತೆಗಳ ಮೇಲಿನ ನೀರು ಮಾತ್ರ ಕಡಿಮೆಯಾಗುತ್ತಿಲ್ಲ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದು, ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ.

ಬೆಂಗಳೂರು, (ಮೇ 19): ನಿನ್ನೆ(ಮೇ 18) ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ಅಷ್ಟ ದಿಕ್ಕುಗಳಲ್ಲೂ ಮಳೆಯಾಗಿದ್ದು, ವಾರದ ಮೊದಲ ದಿನವೇ ಸಿಟಿ ಮಂದಿಗೆ ಕಿರಿಕಿರಿ ಉಂಟಾಗಿದೆ. ನಗರದ ರಸ್ತೆಗಳ ಮೇಲೆ ಭಾರೀ ಪ್ರಮಾಣದ ಮಳೆ ನೀರು ನಿಂತುಕೊಂಡಿದ್ದು, ಕರೆಗಳಂತಾಗಿವೆ. ಮಳೆ ನಿಂತಿದ್ದರು. ರಸ್ತೆಗಳ ಮೇಲಿನ ನೀರು ಮಾತ್ರ ಕಡಿಮೆಯಾಗುತ್ತಿಲ್ಲ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದು, ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ. ಅದರಲ್ಲೂ ಹೊಸೂರು ರಸ್ತೆಯಲ್ಲಿ ಕಳೆದ 2 ಗಂಟೆಗಳಿಂದ ಫುಲ್​ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮುಂದೆ ಸಾಗಲಾದೆ ಹೆದ್ದಾರಿಯಲ್ಲಿ ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ಇದರಲ್ಲಿ ಅಂಬ್ಯುಲೆನ್ಸ್ ಸಿಲುಕಿಕೊಂಡು ಪರದಾಡಿದೆ.

Loading...
Unable to load recommendations.
Follow Us