ಹೈಕಮಾಂಡ್ನಿಂದ ನಂಗೆ ಯಾವುದೇ ನೋಟೀಸ್ ಬಂದಿಲ್ಲ: ಶಾಮನೂರು ಶಿವಶಂಕರಪ್ಪ, ಶಾಸಕ
ಲಿಂಗಾಯತ ಮಹಾಸಭಾದ ವೀರಶೈವ ಲಿಂಗಾಯತ ಮಹಾ ಅಧಿವೇಶನ ಡಿಸೆಂಬರ್ 23 ಮತ್ತು 24 ರಂದು ನಡೆಯಲಿದೆ ಮತ್ತು ಸುಮಾರು ಒಂದು ಲಕ್ಷ ಜನ ಸೇರಲಿದ್ದಾರೆ ಶಿವಶಂಕರಪ್ಪ ಹೇಳಿದರು. ಅಧಿವೇಶನ ನಡೆಸುತ್ತಿರುವುದು ಲಿಂಗಾಯತರ ಶಕ್ತಿ ಪ್ರದರ್ಶನಕ್ಕಾ ಅಂತ ಕೇಳಿದಾಗ ಅವರು ಒಂದು ಲಕ್ಷ ಜನ ಸೇರಿದರೆ ಅದು ಶಕ್ತಿ ಪ್ರದರ್ಶನ ಹೇಗಾಗುತ್ತದೆ, ಹತ್ತಿಪ್ಪತ್ತು ಲಕ್ಷ ಸೇರಿದರೆ ಅದು ಶಕ್ತಿ ಪ್ರದರ್ಶನ ಅನಿಸಿಕೊಳ್ಳುತ್ತದೆ ಎಂದರು.
ದಾವಣಗೆರೆ: ಶಾಮನೂರು ಶಿವಶಂಕರಪ್ಪನವರ (Shamanur Shivashankarappa) ಮಾತೇ ಹಾಗೆ, ದಾವಣಗೆರೆಯವರು ಹೇಳುವ ಹಾಗೆ ಖಡಾಮುಡಿ! ಇಂದು ನಗರದಲ್ಲಿ ನಡೆದ ವೀರಶೈವ ಲಿಂಗಾಯತ ಸಮುದಾಯದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಲಿಂಗಾಯತ ಮಹಾಸಭಾದ ವೀರಶೈವ ಲಿಂಗಾಯತ ಮಹಾ ಅಧಿವೇಶನ (Veerashaiva Lingayat Convention) ಡಿಸೆಂಬರ್ 23 ಮತ್ತು 24 ರಂದು ನಡೆಯಲಿದೆ ಮತ್ತು ಸುಮಾರು ಒಂದು ಲಕ್ಷ ಜನ ಸೇರಲಿದ್ದಾರೆ ಎಂದು ಹೇಳಿದರು. ಅಧಿವೇಶನ ನಡೆಸುತ್ತಿರುವುದು ಲಿಂಗಾಯತರ ಶಕ್ತಿ ಪ್ರದರ್ಶನಕ್ಕಾ ಅಂತ ಕೇಳಿದಾಗ ಶಿವಶಂಕರಪ್ಪನವರು ಒಂದು ಲಕ್ಷ ಜನ ಸೇರಿದರೆ ಅದು ಶಕ್ತಿ ಪ್ರದರ್ಶನ ಹೇಗಾಗುತ್ತದೆ, ಹತ್ತಿಪ್ಪತ್ತು ಲಕ್ಷ ಸೇರಿದರೆ ಅದು ಶಕ್ತಿ ಪ್ರದರ್ಶನ ಅನಿಸಿಕೊಳ್ಳುತ್ತದೆ ಎಂದು ಹೇಳಿದರು. ಲಿಂಗಾಯತ ಸಮುದಾಯಕ್ಕೆ ಆನ್ಯಾಯ ಅಂತೆಲ್ಲ ಮಾತಾಡಬಾರದೆಂದು ಹೈ ಕಮಾಂಡ್ ಏನಾದರೂ ಅವರಿಗೆ ಸೂಚನೆ ನೀಡಿದೆಯಾ ಅಂತ ಕೇಳಿದ ಪ್ರಶ್ನೆಗೆ ಅವರು, ಯಾವ ಹೈಕಮಾಂಡ್ ಇಲ್ಲ ಎಂಥದ್ದೂ ಇಲ್ಲ ಎಂದು ಶಿವಶಂಕರಪ್ಪ ಹೇಳಿದರು. ಅವರು ಲಿಂಗಾಯತ ಶಾಸಕರು ಮತ್ತು ಅಧಿಕಾರಿಗಳಿಗೆ ಸಸರ್ಕಾರದಿಂದ ಅನ್ಯಾಯವಾಗುತ್ತಿದೆ ಅಂತ ಹೇಳಿದ್ದು ರಾಜ್ಯದಲ್ಲಿ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

