ಹೈಕಮಾಂಡ್​ನಿಂದ ನಂಗೆ ಯಾವುದೇ ನೋಟೀಸ್ ಬಂದಿಲ್ಲ: ಶಾಮನೂರು ಶಿವಶಂಕರಪ್ಪ, ಶಾಸಕ

ಲಿಂಗಾಯತ ಮಹಾಸಭಾದ ವೀರಶೈವ ಲಿಂಗಾಯತ ಮಹಾ ಅಧಿವೇಶನ ಡಿಸೆಂಬರ್ 23 ಮತ್ತು 24 ರಂದು ನಡೆಯಲಿದೆ ಮತ್ತು ಸುಮಾರು ಒಂದು ಲಕ್ಷ ಜನ ಸೇರಲಿದ್ದಾರೆ ಶಿವಶಂಕರಪ್ಪ ಹೇಳಿದರು. ಅಧಿವೇಶನ ನಡೆಸುತ್ತಿರುವುದು ಲಿಂಗಾಯತರ ಶಕ್ತಿ ಪ್ರದರ್ಶನಕ್ಕಾ ಅಂತ ಕೇಳಿದಾಗ ಅವರು ಒಂದು ಲಕ್ಷ ಜನ ಸೇರಿದರೆ ಅದು ಶಕ್ತಿ ಪ್ರದರ್ಶನ ಹೇಗಾಗುತ್ತದೆ, ಹತ್ತಿಪ್ಪತ್ತು ಲಕ್ಷ ಸೇರಿದರೆ ಅದು ಶಕ್ತಿ ಪ್ರದರ್ಶನ ಅನಿಸಿಕೊಳ್ಳುತ್ತದೆ ಎಂದರು.

ಹೈಕಮಾಂಡ್​ನಿಂದ ನಂಗೆ ಯಾವುದೇ ನೋಟೀಸ್ ಬಂದಿಲ್ಲ: ಶಾಮನೂರು ಶಿವಶಂಕರಪ್ಪ, ಶಾಸಕ
|

Updated on: Oct 06, 2023 | 6:34 PM

ದಾವಣಗೆರೆ: ಶಾಮನೂರು ಶಿವಶಂಕರಪ್ಪನವರ (Shamanur Shivashankarappa) ಮಾತೇ ಹಾಗೆ, ದಾವಣಗೆರೆಯವರು ಹೇಳುವ ಹಾಗೆ ಖಡಾಮುಡಿ! ಇಂದು ನಗರದಲ್ಲಿ ನಡೆದ ವೀರಶೈವ ಲಿಂಗಾಯತ ಸಮುದಾಯದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಲಿಂಗಾಯತ ಮಹಾಸಭಾದ ವೀರಶೈವ ಲಿಂಗಾಯತ ಮಹಾ ಅಧಿವೇಶನ (Veerashaiva Lingayat Convention) ಡಿಸೆಂಬರ್ 23 ಮತ್ತು 24 ರಂದು ನಡೆಯಲಿದೆ ಮತ್ತು ಸುಮಾರು ಒಂದು ಲಕ್ಷ ಜನ ಸೇರಲಿದ್ದಾರೆ ಎಂದು ಹೇಳಿದರು. ಅಧಿವೇಶನ ನಡೆಸುತ್ತಿರುವುದು ಲಿಂಗಾಯತರ ಶಕ್ತಿ ಪ್ರದರ್ಶನಕ್ಕಾ ಅಂತ ಕೇಳಿದಾಗ ಶಿವಶಂಕರಪ್ಪನವರು ಒಂದು ಲಕ್ಷ ಜನ ಸೇರಿದರೆ ಅದು ಶಕ್ತಿ ಪ್ರದರ್ಶನ ಹೇಗಾಗುತ್ತದೆ, ಹತ್ತಿಪ್ಪತ್ತು ಲಕ್ಷ ಸೇರಿದರೆ ಅದು ಶಕ್ತಿ ಪ್ರದರ್ಶನ ಅನಿಸಿಕೊಳ್ಳುತ್ತದೆ ಎಂದು ಹೇಳಿದರು. ಲಿಂಗಾಯತ ಸಮುದಾಯಕ್ಕೆ ಆನ್ಯಾಯ ಅಂತೆಲ್ಲ ಮಾತಾಡಬಾರದೆಂದು ಹೈ ಕಮಾಂಡ್ ಏನಾದರೂ ಅವರಿಗೆ ಸೂಚನೆ ನೀಡಿದೆಯಾ ಅಂತ ಕೇಳಿದ ಪ್ರಶ್ನೆಗೆ ಅವರು, ಯಾವ ಹೈಕಮಾಂಡ್ ಇಲ್ಲ ಎಂಥದ್ದೂ ಇಲ್ಲ ಎಂದು ಶಿವಶಂಕರಪ್ಪ ಹೇಳಿದರು. ಅವರು ಲಿಂಗಾಯತ ಶಾಸಕರು ಮತ್ತು ಅಧಿಕಾರಿಗಳಿಗೆ ಸಸರ್ಕಾರದಿಂದ ಅನ್ಯಾಯವಾಗುತ್ತಿದೆ ಅಂತ ಹೇಳಿದ್ದು ರಾಜ್ಯದಲ್ಲಿ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​