ಶಾಸಕಾಂಗ ಸಭೆಯಲ್ಲಿ ಅಚ್ಚರಿ ಬೆಳವಣಿಗೆ, ಒಂದು ಕ್ಷಣ ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕರು ಹೈಕಮಾಂಡ್ ಹೆಗಲಿ ಹಾಕುತ್ತಿದ್ದಂತೆಯೇ ಸಂಪ್ರದಾಯದಂತೆ ಸಿದ್ದರಾಮಯ್ಯನವರು ಸಭೆಯಿಂದ ನೇರವಾಗಿ ಮುಖ್ಯಮಂತ್ರಿ ಕಚೇರಿಗೆ ತೆರಳಿ ಸುರ್ಜೆವಾಲ ಜತೆ ಮಾತುಕತೆ ನಡೆಸಿ ಬಳಿಕ ಸಭೆಗೆ ಆಗಮಿಸಿದ್ದು, ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಇಲ್ಲೇ ಮತ್ತು ಇಂದೇ ಆಯ್ಕೆ ಪ್ರಕ್ರಿಯೆ ಮಾಡುವಂತೆ ಸಿದ್ದರಾಮಯ್ಯನವರನ್ನು ಮನವೊಲಿಸಿದರು. ಬಳಿಕ ಹೈಕಮಾಂಡ್, ಸಿದ್ದರಾಮಯ್ಯ ಮೂಲಕವೇ ಡಿಕೆ ಶಿವಕುಮಾರ್ ಅವರ ಹೆಸರು ಸೂಚಿಸಿತು. ಇದರೊಂದಿಗೆ ಸಿದ್ದರಾಮಯ್ಯ ಮನವೊಲಿಕೆ ನಂತರ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.
ಬೆಂಗಳೂರು, (ಮೇ 30): ಕಾಂಗ್ರೆಸ್ (Congress) ಶಾಸಕಾಂಗ ಸಭೆ ಅಂತ್ಯವಾಗಿದ್ದು,ನೂತನ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಆದ್ರೆ, ಸಭೆಯಲ್ಲಿ ಗೊಂದಲ, ಅಚ್ಚರಿ ವಿದ್ಯಮಾನವೊಂದು ನಡೆದಿದೆ. ಹೌದು.. ಸಭೆ ಆರಂಭದಲ್ಲಿ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರ ಹೆಸರು ಪ್ರಸ್ತಾಪಿಸಿ ಒನ್ ಲೈನ್ ನಿರ್ಣಯ ಮಂಡಿಸಿದರು. ಇದಕ್ಕೆ ಪರಮೇಶ್ವರ್ ಅವರು ಅನುಮೋದನೆ ನೀಡಿದರು. ಆದ್ರೆ, ಶಾಸಕರು ಒಪ್ಪಿಗೆ ಸೂಚಿಸಿದೇ, ಎಐಸಿಸಿ ಹೇಳಿದವರಿಗೆ ನಮ್ಮ ಬೆಂಬಲ ಎಂದಿದ್ದಾರೆ. ಇದರಿಂದ ಕೆಲ ಕಾಲ ಗೊಂದಲ ಉಂಟಾಗಿದ್ದು, ಸಭೆಗೆ ಐದು ನಿಮಿಷ ಬ್ರೇಕ್ ನೀಡಲಾಯ್ತು.
ಶಾಸಕರು ಹೈಕಮಾಂಡ್ ಹೆಗಲಿ ಹಾಕುತ್ತಿದ್ದಂತೆಯೇ ಸಂಪ್ರದಾಯದಂತೆ ಸಿದ್ದರಾಮಯ್ಯನವರು ಸಭೆಯಿಂದ ನೇರವಾಗಿ ಮುಖ್ಯಮಂತ್ರಿ ಕಚೇರಿಗೆ ತೆರಳಿ ಸುರ್ಜೆವಾಲ ಜತೆ ಮಾತುಕತೆ ನಡೆಸಿ ಬಳಿಕ ಸಭೆಗೆ ಆಗಮಿಸಿದ್ದು, ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಇಲ್ಲೇ ಮತ್ತು ಇಂದೇ ಆಯ್ಕೆ ಪ್ರಕ್ರಿಯೆ ಮಾಡುವಂತೆ ಸಿದ್ದರಾಮಯ್ಯನವರನ್ನು ಮನವೊಲಿಸಿದರು. ಬಳಿಕ ಹೈಕಮಾಂಡ್, ಸಿದ್ದರಾಮಯ್ಯ ಮೂಲಕವೇ ಡಿಕೆ ಶಿವಕುಮಾರ್ ಅವರ ಹೆಸರು ಸೂಚಿಸಿತು. ಇದರೊಂದಿಗೆ ಸಿದ್ದರಾಮಯ್ಯ ಮನವೊಲಿಕೆ ನಂತರ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.
2023ರ ಚುನಾವಣೆ ನಂತರ ಸರ್ಕಾರ ರಚನೆ ವೇಳೆ ಡಿಕೆ ಶಿವಕುಮಾರ್ ಅವರು CLP ನಾಯಕನ ಹೆಸರು ಹೇಳದೆ ಹೈಕಮಾಂಡ್ ಹೆಸರೇಳಿ ನಿರ್ಗಮಿಸಿದ್ದರು. ಇದೀಗ ಸಿದ್ದರಾಮಯ್ಯನವರು ಸಹ ಅದೇ ಮಾದರಿ ಅನುಸರಿಸಿ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ ಎನ್ನಲಾಗಿದೆ.


