ಪಕ್ಷದ ವರಿಷ್ಠರು ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರೋದು ಖಂಡಿತ ಬೇಸರ ಮೂಡಿಸಿದೆ: ಡಿವಿ ಸದಾನಂದ ಗೌಡ, ಸಂಸದ

ಪಕ್ಷದ ಹೈಕಮಾಂಡ್ ಇದುವರೆಗೆ ಒಬ್ಬ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡದಿರೋದು, ರಾಜ್ಯಾಧ್ಯಕ್ಷರ ಅವಧಿ ಮುಗಿದರೂ ಹೊಸಬರನ್ನು ಆ ಸ್ಥಾನಕ್ಕೆ ನೇಮಕ ಮಾಡದಿರೋದು ಒಂದು ತಪ್ಪು ಸಂದೇಶವನ್ನು ರವಾನಿಸುತ್ತಿದೆ ಎಂದು ಸದಾನಂದ ಗೌಡ ಹೇಳಿದರು. ಕುಟುಂಬ ರಾಜಕಾರಣ ಸಲ್ಲದು ಅಂತ ಅವರು ಹೇಳಿದ್ದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ದಾಳಿ ನಡೆಸಿದಂತಿತ್ತು.

ಪಕ್ಷದ ವರಿಷ್ಠರು ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರೋದು ಖಂಡಿತ ಬೇಸರ ಮೂಡಿಸಿದೆ: ಡಿವಿ ಸದಾನಂದ ಗೌಡ, ಸಂಸದ
|

Updated on: Nov 10, 2023 | 3:09 PM

ಬೆಂಗಳೂರು: ಬಿಜೆಪಿ ಹೈಕಮಾಂಡ್ ವಿರುದ್ಧ ಅಸಮಾಧಾನ ಮತ್ತು ಬೇಸರ ವ್ಯಕ್ತಪಡಿಸಿದ ರಾಜ್ಯದ ಮೊದಲ ನಾಯಕ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿವಿ ಸದಾನಂದ ಗೌಡ (DV Sadananda Gowda) ಅಂದರೆ ಉತ್ಪ್ರೇಕ್ಷೆ ಅನಿಸದು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಅವರು ಚುನಾವಣಾ ರಾಜಕೀಯದಿಂದ (electoral politics) ದೂರ ಸರಿದಿರುವ ಬಗ್ಗೆ ತಮಗೆ ಖಂಡಿತ ಬೇಸರವಿಲ್ಲ, ಯಾಕೆಂದರೆ ಅದರ ಬಗ್ಗೆ 2019 ರಲ್ಲೇ ಸುಳಿವು ನೀಡಿದ್ದೆ ಎಂದ ಅವರು ಆದರೆ 2023 ವಿಧಾನಸಭಾ ಚುನಾವಣೆಯಲ್ಲಿ (Assembly polls) ಪಕ್ಷ ಸೋಲು ಅನುಭವಿಸಿದ ಬಳಿಕ ದೆಹಲಿಯ ವರಿಷ್ಠರು ರಾಜ್ಯದ ನಾಯಕರನ್ನು ಕಡೆಗಣಿಸಿರುವ ಬಗ್ಗೆ ಮತ್ತು ವಿಶ್ವಾಸಕ್ಕೆ ತೆಗೆದುಕೊಳ್ಳದ ಬಗ್ಗೆ ಖಂಡಿತ ಬೇಸರವಿದೆ ಅಂತ ಹೇಳಿದರು. ಪಕ್ಷದ ಹೈಕಮಾಂಡ್ ಇದುವರೆಗೆ ಒಬ್ಬ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡದಿರೋದು, ರಾಜ್ಯಾಧ್ಯಕ್ಷರ ಅವಧಿ ಮುಗಿದರೂ ಹೊಸಬರನ್ನು ಆ ಸ್ಥಾನಕ್ಕೆ ನೇಮಕ ಮಾಡದಿರೋದು ಒಂದು ತಪ್ಪು ಸಂದೇಶವನ್ನು ರವಾನಿಸುತ್ತಿದೆ ಎಂದು ಸದಾನಂದ ಗೌಡ ಹೇಳಿದರು. ಕುಟುಂಬ ರಾಜಕಾರಣ ಸಲ್ಲದು ಅಂತ ಅವರು ಹೇಳಿದ್ದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ದಾಳಿ ನಡೆಸಿದಂತಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ