ಕಾಲ್ತುಳಿತದ ಘಟನೆ ನಂತರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಹೈಕಮಾಂಡ್ ವಿವರಣೆ ಕೇಳಿತು: ಸಿದ್ದರಾಮಯ್ಯ

Updated on: Jun 10, 2025 | 5:11 PM

ಕರ್ನಾಟಕ ಸರ್ಕಾರ ಹತ್ತು ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ಬಗ್ಗೆ ಹೈಕಮಾಂಡ್ ಮೆಚ್ಚಗೆ ಸೂಸಿ ಅದನ್ನು ತಾತ್ವಿಕವಾಗಿ ಅಂಗೀಕರಿಸಿದೆ, ಆದರೆ ಗಣತಿಯನ್ನು ಹತ್ತು ವರ್ಷಗಳಷ್ಟು ಹಿಂದೆ ಮಾಡಿದ್ದರಿಂದ ವರದಿಯಲ್ಲಿನ ಅಂಕಿ ಅಂಶಗಳು ಬದಲಾಗಿವೆ, ಇದೇ ಕಾರಣಕ್ಕೆ ಮರುಸರ್ವೇ ಅವಶ್ಯಕತೆಯಿದೆ ಎಂದು ವರಿಷ್ಠರು ಅಭಿಪ್ರಾಯಪಟ್ಟಿದ್ದಾರೆ, ಅದನ್ನು ಮುಂದಿನ 90ದಿನಗಳೊಳಗೆ ಮಾಡಿಸಿ ವರದಿ ಸಲ್ಲಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ದೆಹಲಿ, ಜೂನ್ 10: ರಾಜಧಾನಿಯಲ್ಲಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ (Congress high command) ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎರಡು ವಿಷಯಗಳನ್ನು ಪ್ರಮುಖವಾಗಿ ಚರ್ಚಿಸಲಾಯಿತು, ಮೊದಲನೆಯದ್ದು ಜಾತಿ ಗಣತಿ ಮತ್ತು ಎರಡನೇಯದ್ದು ಒಂದು ವಾರದ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದ ಘಟನೆ ಎಂದು ಹೇಳಿದರು. ಕಾಲ್ತುಳಿತ ಸಂಭವಿಸಿದ ಬಳಿಕ ಏನೆಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ-ನ್ಯಾಯಾಂಗ ತನಿಖೆ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಿಂದ ವಿಚಾರಣೆ, ಪೊಲೀಸ್ ಮತ್ತು ಗುಪ್ತಚರ ವಿಭಾಗ ಅಧಿಕಾರಿಗಳ ಅಮಾನತು, ಮೊದಲಾದವುಗಳನ್ನು ಹೈಕಮಾಂಡ್​ಗೆ ವಿವರಿಸಲಾಯಿತು ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಮುಡಾ ಹಗರಣದಲ್ಲಿ 100 ಕೋಟಿ ಆಸ್ತಿ ಜಪ್ತಿ: ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More